ಸಿಎಂ ಸಿದ್ದರಾಮಯ್ಯ 
ರಾಜ್ಯ

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ; ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ನಿರತವಾಗಿದ್ದು, ಚುನಾವಣೆಯಲ್ಲಿ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಕಾರಣ. ಬರಗಾಲ ಬಂದಿದೆ ನಿಜ. ಆದರೆ, ಅಧಿಕಾರ ಹಂಚಿಕೆ ಮಾಡಬಾರದೆ, ರೂ.3.71 ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದೇವೆ. ನಿಗಮ ಮಂಡಳಿ ಅಧ್ಯಕ್ಷರಿಗೆ ಅಧಿಕಾರ ನೀಡಲು ಹೆಚ್ಚು ಹಣ ವೆಚ್ಚವಾಗುವುದಿಲ್ಲ.

ಚಿಕ್ಕಮಗಳೂರು ತಾಲೂಕು ಬರಪಟ್ಟಿಗೆ ಸೇರಿಸಲು ಹಲವು ಮಾನದಂಡಗಳಿವೆ. ಅವುಗಳ ಅನುಸಾರ 17 ತಾಲೂಕುಗಳು ಬರ ಪಟ್ಟಿಯಿಂದ ಹೊರಗಿವೆ. ಅದರಲ್ಲಿ ಚಿಕ್ಕಮಗಳೂರು ಕೂಡ ಒಂದು. ವ್ಯಾಪ್ತಿಗೆ ಬಂದಿದ್ದರೆ ಎಲ್ಲಾ ತಾಲೂಕುಗಳನ್ನು ಪರಪಟ್ಟಿಗೆ ಸೇರಿಸುತ್ತಿದ್ದೆವು ಎಂದು ತಿಳಿಸಿದರು.

‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಾಗಿರುವ ಮಂಗನ ಕಾಯಿಲೆ ತಡೆಗೆ ಕ್ರಮ ಕೈಗೊಳ್ಳುವ ಬಗ್ಗೆ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ. ಅಕ್ರಮ ಭೂಮಂಜೂರಾತಿ ಬಗ್ಗೆ ತಹಶೀಲ್ದಾರ್‌ಗಳ ತಂಡ ನಡೆಸಿರುವ ತನಿಖಾ ವರದಿ ಕಂದಾಯ ಸಚಿವರ ಬಳಿ ಇದ್ದು, ಅವರೊಂದಿಗೂ ಈ ಬಗ್ಗೆ ಚರ್ಚಿಸುತ್ತೇನೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT