ಶೋಭಾ ಕರಂದ್ಲಾಜೆ 
ರಾಜ್ಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಟೀಕೆ

ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ.

ನವದೆಹಲಿ: ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ.

ಮಂಗಳೂರಿನ ಕಡಬ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಶಂಕಿತ ವ್ಯಕ್ತಿಯೊಬ್ಬರು ನಡೆಸಿದ ಆಸಿಡ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಮತ್ತು ಸುವ್ಯವಸ್ಥೆಯ ತೀವ್ರ ಸವಾಲುಗಳನ್ನು ಒತ್ತಿ ಹೇಳಿದ್ದಾರೆ.

"ಕಡಬ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯರ ಮೇಲೆ ಕೇರಳದ ಆರೋಪಿಯೊಬ್ಬ ನಡೆಸಿದ ಆಸಿಡ್ ದಾಳಿಯು ಭೀಕರವಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಹೆಚ್ಚುತ್ತಿರುವ ಅಪರಾಧಗಳ ಪ್ರಮಾಣವನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ಗೃಹ ಸಚಿವ ಜಿ ಪರಮೇಶ್ವರ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ,ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಪ್ರತಿದಿನವೂ ಹೊಸ ಅಪರಾಧಗಳು ನಡೆಯುತ್ತಿರುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ. ಗೃಹ ಸಚಿವ ಪರಮೇಶ್ವರ ಅವರ ನಿಷ್ಪರಿಣಾಮಕಾರಿ ನಾಯಕತ್ವ ಎದ್ದುಕಾಣುತ್ತಿದೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ. ಕರ್ನಾಟಕದ ನಾಗರಿಕರ ಸುರಕ್ಷತೆಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT