ವಿದೇಶಾಂಗ ಸಚಿವ ಎಸ್ ಜೈಶಂಕರ್ 
ರಾಜ್ಯ

ರಷ್ಯಾ ಜೊತೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ: ಖರ್ಗೆ ಪತ್ರಕ್ಕೆ ವಿದೇಶಾಂಗ ಕಚೇರಿ ಪ್ರತಿಕ್ರಿಯೆ

ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ...

ಕಲಬುರಗಿ: ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಈ ಮನವಿಗೆ ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ರಷ್ಯಾದ ಅಧಿಕಾರಿಗಳೊಂದಿಗೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.

ಭಾರತ ಸರ್ಕಾರ ನಾಗರೀಕರಿಗೆ ಯಾವಾಗಲೂ ಸುರಕ್ಷತೆ, ಭದ್ರತೆಯನ್ನು ಖಚಿತಪಡಿಸುತ್ತದೆ. ಭಾರತೀಯರ ರಕ್ಷಣೆಗೆ ಧಾವಿಸುವಂತೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನವದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೂ ವಿದೇಶಾಂಗ ಕಾರ್ಯದರ್ಶಿ ಮಾತುಕತೆ ನಡೆಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಯುದ್ಧ ಪೀಡಿತ ಪ್ರದೇಶದಿಂದ ದೂರವಿರಲು ಭಾರತೀಯರಿಗೆ ಸಲಹೆ ನೀಡಲಾಗಿದೆ. ಸತತ ಪರಿಶ್ರಮದ ಫಲವಾಗಿ ಕೆಲವು ಭಾರತೀಯ ಪ್ರಜೆಗಳ ವಾಪಸಾತಿ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT