ವಿದೇಶಾಂಗ ಸಚಿವ ಎಸ್ ಜೈಶಂಕರ್ 
ರಾಜ್ಯ

ರಷ್ಯಾ ಜೊತೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ: ಖರ್ಗೆ ಪತ್ರಕ್ಕೆ ವಿದೇಶಾಂಗ ಕಚೇರಿ ಪ್ರತಿಕ್ರಿಯೆ

ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ...

ಕಲಬುರಗಿ: ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಈ ಮನವಿಗೆ ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ರಷ್ಯಾದ ಅಧಿಕಾರಿಗಳೊಂದಿಗೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.

ಭಾರತ ಸರ್ಕಾರ ನಾಗರೀಕರಿಗೆ ಯಾವಾಗಲೂ ಸುರಕ್ಷತೆ, ಭದ್ರತೆಯನ್ನು ಖಚಿತಪಡಿಸುತ್ತದೆ. ಭಾರತೀಯರ ರಕ್ಷಣೆಗೆ ಧಾವಿಸುವಂತೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನವದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೂ ವಿದೇಶಾಂಗ ಕಾರ್ಯದರ್ಶಿ ಮಾತುಕತೆ ನಡೆಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಯುದ್ಧ ಪೀಡಿತ ಪ್ರದೇಶದಿಂದ ದೂರವಿರಲು ಭಾರತೀಯರಿಗೆ ಸಲಹೆ ನೀಡಲಾಗಿದೆ. ಸತತ ಪರಿಶ್ರಮದ ಫಲವಾಗಿ ಕೆಲವು ಭಾರತೀಯ ಪ್ರಜೆಗಳ ವಾಪಸಾತಿ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT