ಎಂಬಿ ಪಾಟೀಲ್ 
ರಾಜ್ಯ

ತುಮಕೂರು- ದಾವಣಗೆರೆ, ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ರೂ. 93.32 ಕೋಟಿ ಬಿಡುಗಡೆ- ಎಂಬಿ ಪಾಟೀಲ

ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು, ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ರೂ. 50 ಮತ್ತು 43.32 ಕೋಟಿ ಸೇರಿದಂತೆ ಒಟ್ಟು ರೂ. 93.32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು, ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ರೂ. 50 ಮತ್ತು 43.32 ಕೋಟಿ ಸೇರಿದಂತೆ ಒಟ್ಟು ರೂ. 93.32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೋಮವಾರ ತಿಳಿಸಿದ್ದಾರೆ.

ಇದಲ್ಲದೇ, ಮೈಸೂರು- ರಾಯಚೂರು ವಿಮಾನ ನಿಲ್ದಾಣಗಳ ಕಾಮಗಾರಿಗಳಾಗಿ ಒಟ್ಟು ರೂ. 57.63 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಪೈಕಿ ರೂ. 14. 62 ಕೋಟಿ ರಾಯಚೂರು ವಿಮಾನ ನಿಲ್ದಾಣದ ಕೆಲಸಗಳಿಗೆ ವಿನಿಯೋಗವಾಗಲಿದೆ. ಮೈಸೂರಿನಲ್ಲಿ ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈ ಹಣ ಬಳಸಲಾಗುವುದು ಎಂದು ಅವರು ಹೇಳಿದ್ದಾರೆ.

ತುಮಕೂರನ್ನು ಮಧ್ಯಕರ್ನಾಟಕದೊಂದಿಗೆ ಬೆಸೆಯಲಿರುವ ತುಮಕೂರು- ದಾವಣಗೆರೆ ರೈಲ್ವೆ ಯೋಜನೆ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ್ದಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗಗಳಿಗೆ ತ್ವರಿತಗತಿಯಲ್ಲಿ ರೈಲು ಸಂಚಾರ ಸಾಧ್ಯವಾಗಲಿದೆ. ಹಾಗೆಯೇ ಗದಗ, ವಾಡಿ ರೈಲು ಮಾರ್ಗದ ಅಭಿವೃದ್ಧಿಯಿಂದ ಹುಬ್ಬಳ್ಳಿ ಒಳಗೊಂಡಂತೆ ಕಿತ್ತೂರು ಕರ್ನಾಟಕ, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಿಗೆ ಸುಲಭವಾಗಿ ತಲುಪಬಹುದಾಗಿದೆ. ಇದರಿಂದ ಈ ಜಿಲ್ಲೆಗಳಲ್ಲಿ ಮೂಲಸೌಕರ್ಯ ವೃದ್ಧಿ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆಯಲಿದೆ ಎಂದು ಅವರು ವಿವರಿಸಿದ್ದಾರೆ.

ರೈಲು ಯೋಜನೆಗಳು ಮೂಲತ: ಕೇಂದ್ರ ಸರ್ಕಾರಕ್ಕೆ ಸೇರಿದ್ದರೂ ಕೆಲವು ಯೋಜನೆಗಳಿಗೆ ತಗಲುವ ಒಟ್ಟು ವೆಚ್ಚದಲ್ಲಿ ಶೇ.50 ರಷ್ಟನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಭೂಸ್ವಾಧೀ ಪ್ರಕ್ರಿಯೆ ಎರಡೂ ಯೋಜನೆಗಳ ವ್ಯಾಪ್ತಿಯಲ್ಲಿ ಅಂತಿಮ ಹಂತದಲ್ಲಿದೆ.ಇದು ಮುಗಿದ ಕೂಡಲೇ ಯೋಜನೆ ಕಾಮಗಾರಿಗಳು ಕ್ಷೀಪ್ರಗತಿಯಲ್ಲಿ ನಡೆಯಲಿವೆ ಎಂದು ಅವರು ಮಾಹಿತಿನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT