ಸುಚನಾ ಸೇಠ್ 
ರಾಜ್ಯ

ಮಗನನ್ನು ಕೊಂದ ಬೆಂಗಳೂರು ಸಿಇಒ: ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

ನಾಲ್ಕು ವರ್ಷದ ಮಗನನ್ನು ಕೊಂದ ಆರೋಪ ಹೊತ್ತಿರುವ ಸ್ಟಾರ್ಟ್‌ಅಪ್‌ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

ಬೆಂಗಳೂರು: ನಾಲ್ಕು ವರ್ಷದ ಮಗನನ್ನು ಕೊಂದ ಆರೋಪ ಹೊತ್ತಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್‌ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

ಮಾನಸಿಕ ಆರೋಗ್ಯ ಕಾಯಿದೆಯಡಿ ವೈದ್ಯರ ಮಂಡಳಿಯಿಂದ ಆಕೆಯ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸುವಂತೆ ಸುಚನಾ ಸೇಠ್ ಅವರ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯ ಸಮಯದಲ್ಲಿ, ಪೊಲೀಸರು ಮನವಿಯನ್ನು ವಿರೋಧಿಸಿದ್ದರು., ಬಂಧನದಲ್ಲಿರುವಾಗ ಆಕೆಯ ಮಾನಸಿಕ ಆರೋಗ್ಯದ ಸ್ಥಿತಿಯನ್ನು ಮೌಲ್ಯಮಾಪನ ಮಾಡುವಾಗ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳು ಕಂಡಿಲ್ಲ ಎಂದು ತಿಳಿಸಿದ್ದರು.

ನ್ಯಾಯಾಲಯವು ಸೋಮವಾರ ಅರ್ಜಿಯನ್ನು ಅನುಮತಿಸಿದ ನಂತರ, ಆಕೆಯ ಮಾನಸಿಕ ಸ್ಥಿತಿಯ ಹೊಸ ಪರೀಕ್ಷೆಗಾಗಿ ಪೊಲೀಸರು ಸೇಠ್ (39) ನನ್ನು ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದು ಸುಚನಾ ಸೇಠ್ ತಂದೆ ಪರ ವಕೀಲರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಗೋವಾ ಪೊಲೀಸರು, ಈ ಹಿಂದೆ ಮನವಿಯನ್ನು ವಿರೋಧಿಸಿದ್ದರು, ಜನವರಿಯಲ್ಲಿ ಆಕೆ ಬಂಧನದಲ್ಲಿದ್ದ ಅವಧಿಯಲ್ಲಿ ಆಕೆಯ ಮಾನಸಿಕ ಆರೋಗ್ಯದ ಮೌಲ್ಯಮಾಪನ ಸೇರಿದಂತೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅವರು ತಮ್ಮ ಮೌಲ್ಯಮಾಪನಗಳಲ್ಲಿ ಸ್ಪಷ್ಟ ಮತ್ತು ತರ್ಕಬದ್ಧ ಉತ್ತರಗಳನ್ನು ನೀಡಿದರು. ಅವರು ಯಾವುದೇ ಸಕ್ರಿಯ ಸಾವಿನ ಆಶಯಗಳನ್ನು ಅಥವಾ ಆತ್ಮಹತ್ಯೆ ಪ್ರವೃತ್ತಿಯನ್ನು ವರದಿ ಮಾಡಿಲ್ಲ. ಆಕೆಯ ಪ್ರತಿಕ್ರಿಯೆಗಳಲ್ಲಿ ಯಾವುದೇ ವಿಕೃತ ಮನಸ್ಥಿತಿಯ ಲಕ್ಷಣಗಳು ಕಂಡುಬಂದಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ ಆರಂಭಿಸಿರುವ ಸೇಠ್, ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕ್ಯಾಂಡೋಲಿಮ್ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮಗನನ್ನು ಕೊಂದ ಆರೋಪ ಹೊತ್ತಿದ್ದಾರೆ. ತನ್ನ ಪತಿಯೊಂದಿಗೆ ವಿಚ್ಛೇದನದ ವಿವಾದದಲ್ಲಿ ಸಿಲುಕಿರುವ AI ಸ್ಟಾರ್ಟ್ ಅಪ್ ಸಿಇಒ, ಜನವರಿ 8 ರಂದು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಿಂದ ತನ್ನ ಮಗನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ಬಂಧಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT