ಕರ್ನಾಟಕ ಹೈಕೋರ್ಟ್ 
ರಾಜ್ಯ

ವೆಚ್ಚ ಪರಿಗಣಿಸಿ ಪತ್ನಿಗೆ ನೀಡುವ ಜೀವನಾಂಶ ಕಡಿತಗೊಳಿಸಲಾಗದು: ಹೈಕೋರ್ಟ್

ಪತಿಯ ವೇತನದಲ್ಲಿ ಭವಿಷ್ಯನಿಧಿ, ಮನೆ ಬಾಡಿಗೆ, ಪೀಠೋಪಕರಣಗಳ ಖರೀದಿಗೆ ಆಗುತ್ತಿರುವ ವೆಚ್ಚ ಪರಿಗಣಿಸಿ ಪತ್ನಿಗೆ ನೀಡುವ ಜೀವನಾಂಶ ಮೊತ್ತವನ್ನು ಕಡಿತಗೊಳಿಸಲಾಗದು ಎಂದು ಹೈಕೊರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ

ಬೆಂಗಳೂರು: ಪತಿಯ ವೇತನದಲ್ಲಿ ಭವಿಷ್ಯನಿಧಿ, ಮನೆ ಬಾಡಿಗೆ, ಪೀಠೋಪಕರಣಗಳ ಖರೀದಿಗೆ ಆಗುತ್ತಿರುವ ವೆಚ್ಚ ಪರಿಗಣಿಸಿ ಪತ್ನಿಗೆ ನೀಡುವ ಜೀವನಾಂಶ ಮೊತ್ತವನ್ನು ಕಡಿತಗೊಳಿಸಲಾಗದು ಎಂದು ಹೈಕೊರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಈ ಕುರಿತು ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರ ಪರಿಣಾಮ ಅರ್ಜಿದಾರರರಿಗೆ (ಪತಿ) 15 ಸಾವಿರ ದಂಡ ವಿಧಿಸಿ, ಪತ್ನಿಗೆ ಪಾವತಿ ಮಾಡುವಂತೆ ಸೂಚನೆ ನೀಡಿದೆ.

ಪತ್ನಿಯ ಜೀವನಾಂಶಕ್ಕಾಗಿ ಮಾಸಿಕ 15 ಸಾವಿರ ಮತ್ತು ಮಕ್ಕಳ ಪೋಷಣೆಗೆ 10 ಸಾವಿರ ರೂಪಾಯಿಗಳನ್ನು ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೈಸೂರು ಜಿಲ್ಲೆಯ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ಪ್ರಕಟಿಸಿತು.

ಅಲ್ಲದೆ, ಅರ್ಜಿದಾರರಿಗೆ ವೇತನದಿಂದ ವೃತ್ತಿಪರ ತೆರಿಗೆ ಮತ್ತು ಆದಾಯ ತೆರಿಗೆ ಮಾತ್ರ ಕಡ್ಡಾಯವಾಗಿ ಕಡಿತವಾಗುತ್ತದೆ. ಇನ್ನುಳಿದ ಎಲ್‌ಐಸಿ, ಪೀಠೋಪಕರಣಗಳ ಖರೀದಿಗಳು ಎಲ್ಲವೂ ಅರ್ಜಿದಾರರ ಪ್ರಯೋಜನಕ್ಕಾಗಿ ಕಡಿತವಾಗುತ್ತಿವೆ. ಹೀಗಾಗಿ ಪತ್ನಿಗೆ ಜೀವನಾಂಶ ನೀಡುವ ಸಂದರ್ಭದಲ್ಲಿ ಈ ಮೊತ್ತಗಳನ್ನು ಪರಿಗಣಿಸಿ ಜೀವನಾಂಶವನ್ನು ಕಡಿತಗೊಳಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.

ಅರ್ಜಿದಾರರ ವಾದವನ್ನು ಪುರಸ್ಕರಿಸಿದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 125ರ (ಜೀವನಾಂಶ) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯ ಪ್ರತಿಯೊಂದು ಪ್ರಕರಣದಲ್ಲೂ, ಪತಿ ಕೃತಕ ಕಡಿತಗಳನ್ನು ರಚಿಸುವ ಪ್ರವೃತ್ತಿ ಇರುತ್ತದೆ. ಜೀವನಾಂಶವನ್ನು ನಿರಾಕರಿಸುವ ಸಲುವಾಗಿ ನ್ಯಾಯಾಲಯಗಳನ್ನು ದಾರಿತಪ್ಪಿಸುವ ಉದ್ದೇಶದಿಂದ ಕಡಿಮೆ (ಟೇಕ್ ಹೋಮ್) ಸಂಬಳವನ್ನು ತೋರಿಸುವ ಪ್ರಯತ್ನ ಮಾಡುತ್ತಾರೆ ಎಂದು ಪೀಠ ಹೇಳಿದೆ. ಅಲ್ಲದೆ, ಪ್ರಸ್ತುತ ಸಂದರ್ಭದಲ್ಲಿ, ಕಡಿತಗಳು ಶೇ.50ಕ್ಕಿಂತ ಹೆಚ್ಚಾಗಿದೆ ಎಂದು ಕೋರ್ಟ್ ಗಮನಿಸಿದೆ. ಆದ್ದರಿಂದ, ಕಡಿಮೆ ಮೊತ್ತದ ಜೀವನಾಂಶವನ್ನು ಪಾವತಿಸುವ ಉದ್ದೇಶದಿಂದ ಪತಿ ಹೆಚ್ಚಿನ ಕಡಿತಗಳನ್ನು ತೋರಿಸುವ ವ್ಯವಸ್ಥೆ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ.

ಆದ್ದರಿಂದ, ಮೇಲೆ ಚರ್ಚಿಸಿದ ಈ ಕಡಿತಗಳು ಹೆಂಡತಿಗೆ ಕಡಿಮೆ ಪ್ರಮಾಣದ ಜೀವನಾಂಶವನ್ನು ನೀಡುವ ಅಂಶವಾಗಬಾರದು. ಪ್ರಸ್ತುತ ಪ್ರಕರಣದಲ್ಲಿ, ಅರ್ಜಿದಾರರಾದ ಪತಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿರುವ ಶಾಖಾ ವ್ಯವಸ್ಥಾಪಕರಾಗಿದ್ದು, ತಿಂಗಳಿಗೆ 1,00,000 ರೂ.ಗಿಂತ ಹೆಚ್ಚಿನ ಸಂಬಳ ಪಡೆಯುತ್ತಿದ್ದಾರೆ. ಆಗ ಕೌಟುಂಬಿಕ ನ್ಯಾಯಾಲಯವು ಜೀವನಾಂಶ ನೀಡುವಂತೆ ಸೂಚನೆ ನೀಡಿರುವುದರಲ್ಲಿ ದೋಷಗಳು ಕಂಡುಬಂದಿಲ್ಲ.

ವಿಚಾರಣೆ ವೇಳೆ, ಅರ್ಜಿದಾರರು ಆಗಿರುವ ಎಸ್‌ಬಿಐ ಮ್ಯಾನೇಜರ್ ತಾವು ಪಡೆದುಕೊಳ್ಳುತ್ತಿರುವ ವೇತನದ ರಸೀದಿ ಸಲ್ಲಿಸಿದ್ದರು. ಅಲ್ಲದೆ, ವೇತನದಿಂದ ಆಗುತ್ತಿರುವ ಕಡಿತಗಳನ್ನು ಗಮನದಲ್ಲಿಟ್ಟುಕೊಂಡು ಜೀವನಾಂಶ ನೀಡುವುದಕ್ಕೆ ಹೆಚ್ಚಾಗಲಿದೆ. ಆದ ಕಾರಣ ಜೀವನಾಂಶ ಕಡಿಮೆ ಮಾಡಬೇಕು ಎಂದು ಕೋರಿದ್ದರು. ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರ ಮನವಿಯನ್ನು ತಿರಸ್ಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT