ಸಂಸದೆ ಸುಮಲತಾ ಅಂಬರೀಷ್ 
ರಾಜ್ಯ

KRS ಡ್ಯಾಂ ಸುತ್ತ 'ಟ್ರಯಲ್ ಬ್ಲಾಸ್ಟ್'; ಜಿಲ್ಲಾಡಳಿತದ ಕ್ರಮಕ್ಕೆ ಸಂಸದೆ ಸುಮಲತಾ ವಿರೋಧ

KRS ಡ್ಯಾಂ ಸುತ್ತಮುತ್ತಲಿರುವ ಗಣಿಗಳಲ್ಲಿ ಟ್ರಯಲ್ ಬ್ಲಾಸ್ಟ್ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯ: KRS ಡ್ಯಾಂ ಸುತ್ತಮುತ್ತಲಿರುವ ಗಣಿಗಳಲ್ಲಿ ಟ್ರಯಲ್ ಬ್ಲಾಸ್ಟ್ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಮ್ಮ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅಂಬರೀಷ್, 'ಕೆ.ಆರ್.ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಗಿಂತ ಹೆಚ್ಚು ತೀವ್ರತೆಯಲ್ಲಿ ಗಣಿಗಾರಿಕೆಗಳು ಬಳಸುತ್ತಿರುವ ಸೈಲೆಂಟ್ ಬ್ಲಾಸ್ಟ್ ಹಾಗೂ ಮೆಗಾ ಬ್ಲಾಸ್ಟ್ ಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿ, ಕೆ.ಆರ್‌.ಎಸ್ ಅಣೆಕಟ್ಟೆಯ ಹಿತ ರಕ್ಷಣೆಯ ದೃಷ್ಟಿಯಿಂದ ವರದಿ ಸಲ್ಲಿಸದೆ, ಗಣಿ ಮಾಲೀಕರಿಗೆ ಅನುಕೂಲವಾಗುವಂತೆ ಕೆ.ಆರ್.ಎಸ್ ಸಮೀಪ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತದ ನಡೆಯನ್ನು ನಾನು ವಿರೋಧಿಸುತ್ತೇನೆ' ಎಂದು ಹೇಳಿದ್ದಾರೆ.

ಅಂತೆಯೇ, 'ಏಕೆಂದರೆ ಟ್ರಯಲ್ ಬ್ಲಾಸ್ಟ್ ನ ತೀವ್ರತೆ ಕೇವಲ 200 ಮೀಟರ್ ವ್ಯಾಪ್ತಿಯ ವರೆಗೆ ಮಾತ್ರ ವ್ಯಾಪಿಸುತ್ತದೆ, ಆದರೆ ಇವರಿಗೂ ಕೆ.ಆರ್‌.ಎಸ್‌ ಸುತ್ತಮುತ್ತಲ ಪ್ರದೇಶದಲ್ಲಿ ನಡೆದಿರುವ ಯಾವುದೇ ಗಣಿಗಾರಿಕೆಯೂ ಟ್ರಯಲ್ ಬ್ಲಾಸ್ಟ್ ಮಾದರಿಯಲ್ಲಿ ನಡೆದಿಲ್ಲ, ಬದಲಾಗಿ Silent Blast, Mega Blast ಗಳನ್ನು ಮಾಡಿ seismically active zone ನಲ್ಲಿರುವ ಕೆ.ಆರ್.ಎಸ್ ಅಣೆಕಟ್ಟೆಗೆ ಅಪಾಯ ತಂದೊಟ್ಟಿದೆ. ಕೆ.ಆರ್‌.ಎಸ್‌ ಡ್ಯಾಮ್ ಅನ್ನು ಲಕ್ಷ್ಮಣತೀರ್ಥ - ಕೆ.ಆರ್.ಎಸ್ - ಬೆಂಗಳೂರು ನಡುವೆ ಇರುವ Mega lineament ನ ಒಂದೇ ಸೆಲೆಯ ಕಲ್ಲಿನ ಬಂಡೆಯ ಮೇಲೆ ಕಟ್ಟಲಾಗಿದೆ. ಈ ರೀತಿಯ ಅಣೆಕಟ್ಟೆಗಳನ್ನು Sukri-Mortar Dam ಎಂದು ಕರೆಯಲಾಗುತ್ತದೆ.

ಗಣಿಗಾರಿಕೆಗಳಲ್ಲಿ ಉಪಯೋಗಿಸುವ ಸ್ಪೋಟಕಾಂಶಗಳು ಹಾಗೂ ಸ್ಪೋಟಕ ಮಾದರಿಗಳಾದ ಸೈಲೆಂಟ್ ಬ್ಲಾಸ್ಟ್ ಮತ್ತು ಮೆಗಾ ಬ್ಲಾಸ್ಟ್ ಗಳು ಹಲವಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಭೂಮಿಯೊಳಗೆ ವಿಸ್ತೀರ್ಣ ಗೊಂಡಿರುವ ಕೆ.ಆರ್.ಎಸ್ ನ ಕಲ್ಲು ಬಂಡೆಯ ಸೆಲೆಗಳಲ್ಲಿ ಕಂಪನ (vibration) ಸೃಷ್ಟಿಸಿ, ಕೆ.ಆರ್‌.ಎಸ್‌ ಅಣೆಕಟ್ಟೆಗೆ ಅಪಾಯ ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೆ.ಆರ್.ಎಸ್ ಅಣೆಕಟ್ಟೆಯ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವುದು ಮುಂಜಾಗ್ರತಾ ಕ್ರಮವಾಗಿ ಉತ್ತಮ ನಿರ್ಧಾರವಾಗಿದೆ. ಆದರೆ ಇಲ್ಲಿ ನ್ಯಾಯಾಲಯದ ಆದೇಶಕ್ಕೆ ಮಂಕು ಬೂದಿ ಎರಚಿ ಟ್ರಯಲ್ ಬ್ಲಾಸ್ಟ್ ಮೂಲಕ ಮತ್ತೆ ನ್ಯಾಯಾಲಯದ ಆದೇಶವನ್ನು ತಿದ್ದುಪಡಿ ಮಾಡಿಸಿ ಅಕ್ರಮ ಗಣಿಗಾರಿಕೆಗೆ ಉತ್ತೇಜನ ನೀಡಲು ಮುಂದಾಗಿರುವ ಈ ನಿರ್ಧಾರಕ್ಕೆ ನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT