ಸಂಸದೆ ಸುಮಲತಾ ಅಂಬರೀಷ್ 
ರಾಜ್ಯ

KRS ಡ್ಯಾಂ ಸುತ್ತ 'ಟ್ರಯಲ್ ಬ್ಲಾಸ್ಟ್'; ಜಿಲ್ಲಾಡಳಿತದ ಕ್ರಮಕ್ಕೆ ಸಂಸದೆ ಸುಮಲತಾ ವಿರೋಧ

KRS ಡ್ಯಾಂ ಸುತ್ತಮುತ್ತಲಿರುವ ಗಣಿಗಳಲ್ಲಿ ಟ್ರಯಲ್ ಬ್ಲಾಸ್ಟ್ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯ: KRS ಡ್ಯಾಂ ಸುತ್ತಮುತ್ತಲಿರುವ ಗಣಿಗಳಲ್ಲಿ ಟ್ರಯಲ್ ಬ್ಲಾಸ್ಟ್ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಮ್ಮ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅಂಬರೀಷ್, 'ಕೆ.ಆರ್.ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಗಿಂತ ಹೆಚ್ಚು ತೀವ್ರತೆಯಲ್ಲಿ ಗಣಿಗಾರಿಕೆಗಳು ಬಳಸುತ್ತಿರುವ ಸೈಲೆಂಟ್ ಬ್ಲಾಸ್ಟ್ ಹಾಗೂ ಮೆಗಾ ಬ್ಲಾಸ್ಟ್ ಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿ, ಕೆ.ಆರ್‌.ಎಸ್ ಅಣೆಕಟ್ಟೆಯ ಹಿತ ರಕ್ಷಣೆಯ ದೃಷ್ಟಿಯಿಂದ ವರದಿ ಸಲ್ಲಿಸದೆ, ಗಣಿ ಮಾಲೀಕರಿಗೆ ಅನುಕೂಲವಾಗುವಂತೆ ಕೆ.ಆರ್.ಎಸ್ ಸಮೀಪ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಜಿಲ್ಲಾಡಳಿತದ ನಡೆಯನ್ನು ನಾನು ವಿರೋಧಿಸುತ್ತೇನೆ' ಎಂದು ಹೇಳಿದ್ದಾರೆ.

ಅಂತೆಯೇ, 'ಏಕೆಂದರೆ ಟ್ರಯಲ್ ಬ್ಲಾಸ್ಟ್ ನ ತೀವ್ರತೆ ಕೇವಲ 200 ಮೀಟರ್ ವ್ಯಾಪ್ತಿಯ ವರೆಗೆ ಮಾತ್ರ ವ್ಯಾಪಿಸುತ್ತದೆ, ಆದರೆ ಇವರಿಗೂ ಕೆ.ಆರ್‌.ಎಸ್‌ ಸುತ್ತಮುತ್ತಲ ಪ್ರದೇಶದಲ್ಲಿ ನಡೆದಿರುವ ಯಾವುದೇ ಗಣಿಗಾರಿಕೆಯೂ ಟ್ರಯಲ್ ಬ್ಲಾಸ್ಟ್ ಮಾದರಿಯಲ್ಲಿ ನಡೆದಿಲ್ಲ, ಬದಲಾಗಿ Silent Blast, Mega Blast ಗಳನ್ನು ಮಾಡಿ seismically active zone ನಲ್ಲಿರುವ ಕೆ.ಆರ್.ಎಸ್ ಅಣೆಕಟ್ಟೆಗೆ ಅಪಾಯ ತಂದೊಟ್ಟಿದೆ. ಕೆ.ಆರ್‌.ಎಸ್‌ ಡ್ಯಾಮ್ ಅನ್ನು ಲಕ್ಷ್ಮಣತೀರ್ಥ - ಕೆ.ಆರ್.ಎಸ್ - ಬೆಂಗಳೂರು ನಡುವೆ ಇರುವ Mega lineament ನ ಒಂದೇ ಸೆಲೆಯ ಕಲ್ಲಿನ ಬಂಡೆಯ ಮೇಲೆ ಕಟ್ಟಲಾಗಿದೆ. ಈ ರೀತಿಯ ಅಣೆಕಟ್ಟೆಗಳನ್ನು Sukri-Mortar Dam ಎಂದು ಕರೆಯಲಾಗುತ್ತದೆ.

ಗಣಿಗಾರಿಕೆಗಳಲ್ಲಿ ಉಪಯೋಗಿಸುವ ಸ್ಪೋಟಕಾಂಶಗಳು ಹಾಗೂ ಸ್ಪೋಟಕ ಮಾದರಿಗಳಾದ ಸೈಲೆಂಟ್ ಬ್ಲಾಸ್ಟ್ ಮತ್ತು ಮೆಗಾ ಬ್ಲಾಸ್ಟ್ ಗಳು ಹಲವಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಭೂಮಿಯೊಳಗೆ ವಿಸ್ತೀರ್ಣ ಗೊಂಡಿರುವ ಕೆ.ಆರ್.ಎಸ್ ನ ಕಲ್ಲು ಬಂಡೆಯ ಸೆಲೆಗಳಲ್ಲಿ ಕಂಪನ (vibration) ಸೃಷ್ಟಿಸಿ, ಕೆ.ಆರ್‌.ಎಸ್‌ ಅಣೆಕಟ್ಟೆಗೆ ಅಪಾಯ ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೆ.ಆರ್.ಎಸ್ ಅಣೆಕಟ್ಟೆಯ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವುದು ಮುಂಜಾಗ್ರತಾ ಕ್ರಮವಾಗಿ ಉತ್ತಮ ನಿರ್ಧಾರವಾಗಿದೆ. ಆದರೆ ಇಲ್ಲಿ ನ್ಯಾಯಾಲಯದ ಆದೇಶಕ್ಕೆ ಮಂಕು ಬೂದಿ ಎರಚಿ ಟ್ರಯಲ್ ಬ್ಲಾಸ್ಟ್ ಮೂಲಕ ಮತ್ತೆ ನ್ಯಾಯಾಲಯದ ಆದೇಶವನ್ನು ತಿದ್ದುಪಡಿ ಮಾಡಿಸಿ ಅಕ್ರಮ ಗಣಿಗಾರಿಕೆಗೆ ಉತ್ತೇಜನ ನೀಡಲು ಮುಂದಾಗಿರುವ ಈ ನಿರ್ಧಾರಕ್ಕೆ ನಾನು ಸಂಪೂರ್ಣವಾಗಿ ವಿರೋಧಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT