ಪ್ರಾತಿನಿಧಿಕ ಚಿತ್ರ 
ರಾಜ್ಯ

ಕಲಬುರಗಿ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ: ಅಪ್ರಾಪ್ತ ಸೇರಿ ನಾಲ್ವರ ಬಂಧನ

ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರೀಶ್ ಚಕ್ರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಂಗಳವಾರ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರೀಶ್ ಚಕ್ರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಂಗಳವಾರ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಗಂಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರುವರಿ 29ರಂದು ಮೂವರು ಆರೋಪಿಗಳು ಮತ್ತು ಅಪ್ರಾಪ್ತ ಸೇರಿ ಗಿರೀಶ್ ಚಕ್ರ ಎಂಬುವವರನ್ನು ಕೊಂದಿದ್ದರು.

ಪೊಲೀಸರ ಪ್ರಕಾರ, ಗಿರೀಶ್ ಚಕ್ರ ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ ಜಾಧವ್ ಅವರ ಬಲಗೈ ಬಂಟರಾಗಿದ್ದರು. ಗಿರೀಶ್ ಅವರನ್ನು ಇತ್ತೀಚೆಗಷ್ಟೇ ಬಿಎಸ್ಎನ್‌ಎಲ್‌ನ ಸಲಹಾ ಸಮಿತಿ ಸದಸ್ಯರನ್ನಾಗಿ ಉಮೇಶ್ ಜಾಧವ್ ಅವರು ನೇಮಿಸಿದ್ದರು. ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಆಹ್ವಾನಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದು ಸುಪಾರಿ ಕೊಲೆ ಎಂದು ಕುಟುಂಬದವರು ಶಂಕಿಸಿದ್ದರು.

ಈ ಸಂಬಂಧ ಕರ್ನಾಟಕ ಬಿಜೆಪಿ ಘಟಕವು ಆರ್‌ಡಿಪಿಆರ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರತ್ತ ಬೆರಳು ತೋರಿಸಿದ್ದರಿಂದ ಈ ಬೆಳವಣಿಗೆ ರಾಜ್ಯದಲ್ಲಿ ವಿವಾದವನ್ನು ಹುಟ್ಟುಹಾಕಿತ್ತು.

ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಕಲಬುರಗಿ ಜಿಲ್ಲೆಯಲ್ಲಿ ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಿವೆ. ಕಲಬುರಗಿಯಲ್ಲಿನ ಸದ್ಯದ ಪರಿಸ್ಥಿತಿಗೆ ಅವರೇ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!