ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ 
ರಾಜ್ಯ

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ

ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಮಂಗಳೂರು: ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್​​ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಬಗ್ಗೆ ಡಿಸಿ ಕಚೇರಿಯಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳ ಜೊತೆ ಸಭೆ​ ಕರೆಯಲಾಗಿದೆ. ಮೂವರು ವಿದ್ಯಾರ್ಥಿನಿಯರೂ ಅಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತೆಯರಲ್ಲಿ ಒಬ್ಬರಿಗೆ ಶೇ.20, ಮತ್ತೊಬ್ಬರಿಗೆ ಶೇ.12 ಹಾಗೂ ಶೇ.10ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಗಾಯಗಾಗಿವೆ. ವಿದ್ಯಾರ್ಥಿನಿಯರ ನಗು, ಅಳುವನ್ನು ನೋಡಿದೆ. ಅವರ ಮನಸ್ಥೈರ್ಯಕ್ಕೆ ಮೆಚ್ಚಲೇಬೇಕು. 'ನಾವು ಮತ್ತೆ ಕನ್ನಡ ಪರೀಕ್ಷೆ ಬರೆಯಬೇಕಾ' ಎಂದು ಕೇಳಿದ್ದಾರೆ. ಇದರ ಬಗ್ಗೆ ಚಿಂತಿಸಬೇಡಿ ಎಂದು ಹೇಳಿದ್ದೇನೆ" ಎಂದು ಹೇಳಿದರು.

ಪರಿಹಾರವಾಗಿ ಸರ್ಕಾರ ಕೂಡಲೇ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂಪಾಯಿಂತೆ ನೀಡಲಿದೆ. ಬಳಿಕ 20 ಲಕ್ಷ ರೂಪಾಯಿ ಪ್ಲಾಸ್ಟಿಕ್​ ಶಸ್ತ್ರಚಿಕಿತ್ಸೆಗೆ ನೀಡಲಾಗುವುದು. ಸಂತ್ರಸ್ತೆಯರಿಗೆ ಯಾವುದೇ ಕೊರತೆಯಾಗಬಾರದು. ಈ ಸಂದರ್ಭದಲ್ಲಿ ಅವರ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಇಲಾಖೆ ನೋಡಿಕೊಳ್ಳಬೇಕು. ನಾನೂ ಜೊತೆಗಿದ್ದೇನೆ. ಸರ್ಕಾರದಿಂದ ಸಿಗಬೇಕಾದ ಎಲ್ಲಾ ಪರಿಹಾರವನ್ನು ನಾನು ನೋಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ಆರೋಪಿ ಆ್ಯಸಿಡ್​ ಅನ್ನು ಪ್ಲಾಸ್ಟಿಕ್​ ಬಾಟಲ್​ನಲ್ಲಿ ತಂದಿದ್ದರಿಂದ ಅದರ ಸುಡುವ ಪ್ರಮಾಣವನ್ನು ಸ್ವಲ್ಪ ಬಾಟಲ್​ ಹೀರಿಕೊಂಡಿತ್ತು. ಹೀಗಾಗಿ ವಿದ್ಯಾರ್ಥಿನಿಯರ ಮೇಲೆ ಗಂಭೀರ ಪರಿಣಾಮ ಉಂಟುಮಾಡಿಲ್ಲ" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT