ಡಾ ಜಿ ಪರಮೇಶ್ವರ್  
ರಾಜ್ಯ

FSL ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದಾಗಿದ್ದು, ಮುಂದಿನ ಕ್ರಮ: ಡಾ. ಜಿ ಪರಮೇಶ್ವರ್

ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯಸಭೆ ಚುನಾವಣೆ ಮುಗಿದು ಡಾ ನಾಸಿರ್ ಹುಸೇನ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ವೇಳೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಎಫ್ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಎಫ್ ಎಸ್ ಎಲ್ ವರದಿ ಬರಲಿ ಎಂದು ಹೇಳುತ್ತಿದ್ದೆವು. ಎಫ್ ಎಸ್ ಎಲ್ ವರದಿ ಆಧರಿಸಿ ಕ್ರಮ ಕೈಗೊಡಿದ್ದೇವೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ದೃಢಪಟ್ಟಿದೆ. ಹೀಗಾಗಿ ಎಫ್ ಎಸ್ ಎಲ್ ವರದಿ ಆಧರಿಸಿ ಮೂವರನ್ನ ಬಂಧಿಸಲಾಗಿದೆ. ವರದಿಯಲ್ಲಿ ಯಾರು ಘೋಷಣೆ ಕೂಗಿದ್ದಾರೆಂದು ಹೇಳಿಲ್ಲ. ಯಾಕೆ ಕೂಗಿದ್ದಾರೆಂದು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಕ್ಕೆ ಮುಜುಗರ ಆಗುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ಪೊಲೀಸ್ ಅಧಿಕಾರಿಗಳ ಲೋಪ ಇದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ವಿರೋಧ ಪಕ್ಷದವರು ಸುಮ್ಮನೆ ಹೇಳುತ್ತಾರೆ. ಅವರು ಹೇಳ್ತಾರೆ ಎಂದು ಅರೆಸ್ಟ್ ಮಾಡೋಕೆ ಆಗುತ್ತಾ? ನಾವು ಎಫ್ ಎಸ್ ಎಲ್ ವರದಿ ಬರಲಿ ಅಂತಾ ಕಾಯುತ್ತಿದ್ದವು. ಈಗ ಬಂದಿದೆ. ಕ್ರಮ ಕೈಗೊಂಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

ಸಿಸಿಬಿ ಜೊತೆ ಎನ್ ಐಎ ಅಧಿಕಾರಿಗಳು ತನಿಖೆ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ NIA ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಅವರಿಗೆ ಸಿಸಿಬಿ ಪೊಲೀಸರು ನೆರವಾಗಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ