ತಮಿಳು ನಾಡು ಮಾಜಿ ಸಿಎಂ ಜಯಲಲಿತಾ(ಸಂಗ್ರಹ ಚಿತ್ರ) 
ರಾಜ್ಯ

ಜಯಲಲಿತಾ ಚಿನ್ನಾಭರಣಗಳ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣ ಮತ್ತು ಮತ್ತು ಇತರ ಪರಿಕರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು: ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣ ಮತ್ತು ಮತ್ತು ಇತರ ಪರಿಕರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ಮೌಲ್ಯದ ಚಿನ್ನಾಭರಣ ಸೇರಿ ಇತರೆ ವಸ್ತುಗಳನ್ನು ಕಾನೂನಾತ್ಮಕ ವಾರಸುದಾರರಾದ ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯವು 2023ರ ಜುಲೈ 12ರಂದು ವಜಾ ಮಾಡಿತ್ತು.

ಇದನ್ನು ಪ್ರಶ್ನಿಸಿ ಅರ್ಜಿದಾರರಲ್ಲಿ ಒಬ್ಬರಾದ ಜೆ ದೀಪಾ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್‌ 26ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವ ಮುನ್ನವೇ ಅವರು ಮೃತರಾಗಿದ್ದರು. ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದರಾಗಿದ್ದು, ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಕೋರಿದರು.

ಈ ವಾದ ದಾಖಲಿಸಿಕೊಂಡ ಪೀಠವು ವಿಶೇಷ ಸಿಬಿಐ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ನಾಳೆಯಿಂದ ನಡೆಯಬೇಕಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!