ಗೃಹ ಸಚಿವ ಪರಮೇಶ್ವರ್ 
ರಾಜ್ಯ

ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಕೆಫೆ ಸ್ಫೋಟ ಪ್ರಕರಣ ಭೇದಿಸುತ್ತಾರೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಪ್ರಕರಣ ಭೇದಿಸುವ ಭರವಸೆ ಮೂಡಿಸಿವೆ ಎಂದು ಪರಮೇಶ್ವರ್ ಅವರು ಇಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಮ್ಮ ಅಧಿಕಾರಿಗಳು ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಅನುಮಾನದ ಆಧಾರದ ಮೇಲೆ, ಕೆಲವು ಜನರನ್ನು ಪೊಲೀಸರು ವಶಕ್ಕೆ ಪಡೆದು ಅವರಿಂದ "ಮಾಹಿತಿ" ಸಂಗ್ರಹಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ಅವರು ಇನ್ನೂ ಬಂದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT