ಸಂಗ್ರಹ ಚಿತ್ರ 
ರಾಜ್ಯ

ನಗರ, ರಾಜ್ಯದಲ್ಲಿ ವಿದ್ಯುತ್ ಕಡಿತವಿಲ್ಲ: ರಾಜ್ಯ ಸರ್ಕಾರ

ಬೆಂಗಳೂರು ನಗರ, ರಾಜ್ಯಾದ್ಯಂತ ವಿದ್ಯುತ್ ಕಡಿತವಿರುವುದಿಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರು ನಗರ, ರಾಜ್ಯಾದ್ಯಂತ ವಿದ್ಯುತ್ ಕಡಿತವಿರುವುದಿಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಅಥವಾ ರಾಜ್ಯದಲ್ಲಿ ವಿದ್ಯುತ್ ಕಡಿತ ಮಾಡುವುದಿಲ್ಲ. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲತೆ ಮಾಡುವ ಹಿನ್ನೆಲೆಯಲ್ಲಿ ಸುದೀರ್ಘ ನಿರ್ವಹಣಾ ಕಾರ್ಯಗಳನ್ನೂ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದರು.

2023 ರ ವಿದ್ಯುತ್ ಪರಿಸ್ಥಿತಿ ಮತ್ತೆ ಎದುರಾಗದಂತೆ ಮಾಡಲು ಸರ್ಕಾರವು 1500MW ವಿದ್ಯುತ್ ಅನ್ನು ಖರೀದಿಸುತ್ತಿದೆ, ಅದರಲ್ಲಿ 500MWನ್ನು ವಿನಿಮಯ ವ್ಯವಸ್ಥೆಯ ಮೂಲಕ ಇತರ ರಾಜ್ಯಗಳೊಂದಿಗೆ ಪಡೆಯಲಾಗುತ್ತದೆ. ಥರ್ಮಲ್ ಸ್ಟೇಷನ್‌ಗಳ ನಿರ್ವಹಣಾ ಕಾರ್ಯವನ್ನೂ ಕೈಗೆತ್ತಿಕೊಳ್ಳಲಾಗಿದ್ದು, ಬಳ್ಳಾರಿ ಅನಿಲ ಆಧಾರಿತ ವಿದ್ಯುತ್ ಕೇಂದ್ರದ ಕಾಮಗಾರಿಯೂ ಪೂರ್ಣಗೊಂಡಿದೆ. ಒಂದು ತಿಂಗಳ ಅವಧಿಯಲ್ಲಿ ಇದರ ಕಾರ್ಯಾಚರಣೆ ಆರಂಭವಾಗಲಿದೆ. ಕೂಡಗಿ ವಿದ್ಯುತ್‌ ಕೇಂದ್ರಕ್ಕೆ 200 ಮೆಗಾವ್ಯಾಟ್‌ ವಿದ್ಯುತ್‌ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕಳೆದ ವರ್ಷವೂ ಕಠಿಣ ಪರಿಸ್ಥಿತಿ ಹಾಗೂ ಬರಗಾಲದ ಹೊರತಾಗಿಯೂ, ಯಾವುದೇ ವಿದ್ಯುತ್ ಕಡಿತ ಇರಲಿಲ್ಲ. ಇದನ್ನು ಈ ವರ್ಷವೂ ಮುಂದುವರೆಸಲಾಗುವುದು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು, ರೈತರು ಮತ್ತು ಗ್ರಾಹಕರಿಗೆ ಯಾವುದೇ ವಿದ್ಯುತ್ ಕಡಿತ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ವಿದ್ಯುತ್‌ಗೆ ಗರಿಷ್ಠ ಬೇಡಿಕೆ ಹೆಚ್ಚುತ್ತಿದ್ದು, ಬೇಸಿಗೆಯ ಆರಂಭದೊಂದಿಗೆ ಬೇಡಿಕೆ ಹೆಚ್ಚಿದೆ, ಹೀಗಾಗಿ ವಿದ್ಯುತ್‌ ಖರೀದಿ ಮಾಡಲಾಗಿದೆ. ಸೌರಶಕ್ತಿಯ ಸೂಕ್ತ ಬಳಕೆಗೂ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT