ಯುವಕರು ನೀರುಪಾಲು 
ರಾಜ್ಯ

ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರ ಸಾವು

ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರು ಸಾವನ್ನಪ್ಪಿರುವ ಘಟನೆ ಗುರುವಾರ ಕೊಡಗಿನ ಕುಶಾಲನಗರದಲ್ಲಿ ವರದಿಯಾಗಿದೆ.

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರು ಸಾವನ್ನಪ್ಪಿರುವ ಘಟನೆ ಗುರುವಾರ ಕೊಡಗಿನ ಕುಶಾಲನಗರದಲ್ಲಿ ವರದಿಯಾಗಿದೆ.

ಕೊಡಗು ಜಿಲ್ಲೆ (Kodagu News) ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಈ ದುರಂತ ಸಂಭವಿಸಿದ್ದು, ಕಾವೇರಿ ನದಿಯಲ್ಲಿ (Drowned in River Cauvery) ಮುಳುಗಿ ಮೂವರು ಯುವಕರು ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದು, ಮೃತರನ್ನು ವಿನೋದ್, ಸಚಿನ್, ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಮುಳ್ಳುಸೋಗೆ, ಚಿಕ್ಕತ್ತೂರು, ಹೆಬ್ಬಾಲೆ ಮೂಲದದವರು ಎಂದು ತಿಳಿದುಬಂದಿದೆ.

ಜತೆಯಾಗಿ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ‌ ಸಾವನ್ನಪ್ಪಿರುವ ಶಂಕೆ ಇದ್ದು, ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದುಬಾರೆಯ ರ‍್ಯಾಫ್ಟಿಂಗ್‌ ಸಿಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT