ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಂತಾರಾಷ್ಟ್ರೀಯ ಮಹಿಳಾ ದಿನ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಮೇಲೂ ಬೆಳಕು ಚೆಲ್ಲಲಿ: ಸಿಎಂ ಸಿದ್ದರಾಮಯ್ಯ

ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವಿಸುವುದಕ್ಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸವಾಲುಗಳ ಮೇಲೆಯೂ ಬೆಳಕು ಚೆಲ್ಲಬೇಕು. ಲಿಂಗಾಧಾರಿತ ಅಸಮಾನತೆ ಮತ್ತು ಶೋಷಣೆಯ ವಿರುದ್ಧದ ಮಹಿಳೆಯರ ಹೋರಾಟದಲ್ಲಿ ನಾವೆಲ್ಲರೂ ಜೊತೆಯಲ್ಲಿ ನಿಲ್ಲಬೇಕು ಎಂದು ಹೇಳಿದ್ದಾರೆ.

ಅವಕಾಶಗಳಿಂದ ವಂಚಿತವಾಗಿರುವ ಮಹಿಳೆಯರಿಗೆ ಎಲ್ಲಾ ರಂಗಗಳಲ್ಲಿ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ದೊರಕುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಇದು ಬುದ್ಧ, ಬಸವಣ್ಣ, ಅಂಬೇಡ್ಕರರು ಸಾರಿದ ಸಮಸಮಾಜದ ಆಶಯ ಕೂಡ. ಈ ದಿಸೆಯಲ್ಲಿ ಪ್ರಯತ್ನಗಳು ಸಾಗಲಿ.

ನಮ್ಮ ಹಿಂದಿನ ಮತ್ತು ಇಂದಿನ ಸರ್ಕಾರದ ಅರ್ಧದಷ್ಟು ಯೋಜನೆಗಳು ಮಹಿಳಾಕೇಂದ್ರಿತವಾಗಿರುವುದನ್ನು ನಾಡು ಗಮನಿಸಿದೆ. ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಿ, ಈ ದಿನದ ಆಚರಣೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

SCROLL FOR NEXT