ಸಿದ್ದರಾಮಯ್ಯ ಮತ್ತು ಡಾ ಯತೀಂದ್ರ ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ವರುಣಾ ಕ್ಷೇತ್ರದ ಗ್ರಾಮಸ್ಥರ ಘೇರಾವ್

ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ಹೋಗಿದ್ದ ಡಾ ಯತೀಂದ್ರ

ವರುಣಾ(ಮೈಸೂರು): ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ನಡೆದಿದೆ.

ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ಹೋದಾಗ ಜನರು ತಮ್ಮ ಸಮಸ್ಯೆಗಳನ್ನು ಸಂಕಷ್ಟಗಳನ್ನು ಹೇಳುವ ಬದಲು ಘೇರಾವ್ ಹಾಕಿ ಇಲ್ಲಿಂದ ಹೋಗಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರನ್ನು ಸಮಾಧಾನಮಾಡಲು ಸಾಧ್ಯವಾಗದೆ ಪೊಲೀಸರು ಮಧ್ಯೆ ಪ್ರವೇಶಿಸಬೇಕಾಗಿ ಬಂತು.

ಕೊನೆಗೆ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡದೆ ಅಲ್ಲಿಂದ ತೆರಳಿದ ದೃಶ್ಯ ಸೆರೆಯಾಗಿದೆ. ಮಹಿಳೆಯರು ಕೂಡ ಯತೀಂದ್ರ ವಿರುದ್ಧ ಸಿಟ್ಟು, ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ನೂಕಾಟ, ತಳ್ಳಾಟ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು.

ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ಹಲವು ಬಾರಿ ವಿವಾದಗಳುಂಟಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ ಜನತೆಗೆ ಕರೆ-Video

19ನೇ ವಯಸ್ಸಿಗೆ 180 ಅಪ್ರಾಪ್ತ ಬಾಲಕಿಯರ ಜೊತೆ ಸೆಕ್ಸ್; 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊ Viral, ತನ್ವೀರ್ ಅಹ್ಮದ್ ಯಾರು?

'TCSನಲ್ಲಿ ಲವ್ ಜಿಹಾದ್, ಲೈಂಗಿಕ ಕಿರುಕುಳ' ಪ್ರಕರಣ: HR ನಿದಾ ಖಾನ್ 'ಮಾಸ್ಟರ್ ಮೈಂಡ್'; ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!

ತ್ರಿವರ್ಣ ಧ್ವಜ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ Omar Abdullah, ಗೌರವಯುತವಾಗಿ ಬದಲು! Video

Sri Guru Bhairavaikya Mandir: ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ, ಏನಿದರ ವಿಶೇಷತೆ?-Video

SCROLL FOR NEXT