ಸುಧಾ ಮೂರ್ತಿ 
ರಾಜ್ಯ

ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ: ಡಬಲ್‌ ಅಚ್ಚರಿ ಎಂದ ಸುಧಾ ಮೂರ್ತಿ

ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರು ಶುಕ್ರವಾರ ಹೇಳಿದ್ದಾರೆ.

ತಾನು ಎಂದಿಗೂ ಈ ಸ್ಥಾನವನ್ನು ನಿರೀಕ್ಷೆ ಮಾಡಿರಲಿಲ್ಲ ಮತ್ತು ಕೇಂದ್ರ ಸರ್ಕಾರ ನನ್ನನ್ನು ರಾಜ್ಯಸಭೆಗೆ ಏಕೆ ನಾಮನಿರ್ದೇಶನ ಮಾಡಿದೆ ಅಂತ "ಸಂಪೂರ್ಣವಾಗಿ ಗೊತ್ತಿಲ್ಲ" ಎಂದು ಇನ್ಫೋಸಿಸ್‌ನ ಲೋಕೋಪಕಾರ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ(CSR) ಅಂಗವಾದ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹೇಳಿದ್ದಾರೆ.

"ಇದು ಮಹಿಳಾ ದಿನದಂದು ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಡಬಲ್ ಆಶ್ಚರ್ಯಕರವಾಗಿದೆ. ನನಗೆ ತುಂಬಾ ಸಂತೋಷವಾಗಿದೆ. ನಾನು ನಮ್ಮ ಪ್ರಧಾನಿಗೆ ಕೃತಜ್ಞಳಾಗಿದ್ದೇನೆ" ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಫೋನ್ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ಮೇಲ್ಮನೆ ಸದಸ್ಯೆಯಾಗಿ ನಾನು ಏನು ಮಾಡಬಲ್ಲೆ ಎಂಬುದನ್ನು ನೋಡಬೇಕಾಗಿದೆ. ಇದು ನನಗೆ ಹೊಸ ಕ್ಷೇತ್ರವಾಗಿದೆ. ಹಾಗಾಗಿ, ನಾನು ಮೊದಲು ಕುಳಿತು ಅಧ್ಯಯನ ಮಾಡಬೇಕು ಮತ್ತು ನಂತರ ನಾನು ಏನು ಮಾಡಲು ಸಾಧ್ಯ ಅಂತ ಗೊತ್ತಾಗುತ್ತದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರ ಪತ್ನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT