ಸಂಗ್ರಹ ಚಿತ್ರ 
ರಾಜ್ಯ

ಬಾಯ್ ಫ್ರೆಂಡ್ ಜೊತೆ ಸೇರಿ ಮಕ್ಕಳಿಗೆ ನಿತ್ಯ ಕಿರುಕುಳ: ಪ್ರಕರಣ ದಾಖಲು

ಪತಿಯ ಮೇಲಿನ ಸಿಟ್ಟಿನಿಂದ ಪ್ರಿಯಕರನೊಂದಿಗೆ ಸೇರಿ ಮಹಿಳೆಯೊಬ್ಬಳು ತನ್ನ ಸ್ವಂತ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ನಗರದ ಜೆಜೆ ನಗರದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಪತಿಯ ಮೇಲಿನ ಸಿಟ್ಟಿನಿಂದ ಪ್ರಿಯಕರನೊಂದಿಗೆ ಸೇರಿ ಮಹಿಳೆಯೊಬ್ಬಳು ತನ್ನ ಸ್ವಂತ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ನಗರದ ಜೆಜೆ ನಗರದಲ್ಲಿ ಬೆಳಕಿಗೆ ಬಂದಿದೆ.

ಆಯೇಷಾ ಎಂಬಾಕೆ ಇಮ್ರಾನ್ ಖಾನ್ ಎಂಬಾತನನ್ನು ಮದುವೆಯಾಗಿದ್ದಳು. ಆದರೆ ದಾಂಪತ್ಯದಲ್ಲಿ ಕಲಹ ಉಂಟಾಗಿ ನಂತರ ಡಿವೋರ್ಸ್ ಪಡೆದಿದ್ದಳು. ಈ ವೇಳೆ ಮಕ್ಕಳು ತಾಯಿ ಆಯೇಷಾ ಜೊತೆಯಲ್ಲೇ ಇದ್ದವು. ಆಗಾಗ ಇಮ್ರಾನ್ ಭೇಟಿಯಾಗುತ್ತಿದ್ದರು. ಆದರೆ, ಇತ್ತೀಚಿಗೆ ಆಯೀಶಾ ತನ್ನ ಪ್ರಿಯಕರನೊಂದಿಗೆ ಸೇರಿ ಮಕ್ಕಳಿಗೆ ಕಿರುಕುಳ ನೀಡಲು ಆರಂಭಿಸಿದ್ದಳು.

ಮಕ್ಕಳ ಕಚ್ಚುತ್ತಿದ್ದ ಪಾಪಿ ತಾಯಿ, ಫ್ರಿಡ್ಜ್ ನಿಂದ ತಣ್ಣೀರು ಸುರಿದಿದ್ದಾಳೆ. ಬಳಿಕ ಆಕೆಯ ಬಾಯ್ ಫ್ರೆಂಡ್ ಸಲೀಂ ಎಂಬಾತ ಮಕ್ಕಳ ಕೈ ಮೇಲೆ ಸಿಗರೇಟ್ ನಿಂದ ಸುಟ್ಟು ಗಾಯಗೊಳಿಸಿದ್ದಾನೆ. ಚಿತ್ರ ಹಿಂಸೆ ಬಗ್ಗೆ ಹೇಳಿದರೆ ತಂದೆಯನ್ನ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.

ಇದರಿಂದ ಹೆದರಿ ಸಾಕಷ್ಟು ದಿನ ತಂದೆಯ ಬಳಿಯೂ ಹಿಂಸೆ ಬಗ್ಗೆ ಮಕ್ಕಳು ಹೇಳಿಕೊಂಡಿಲ್ಲ. ಫೆಬ್ರವರಿ 23 ಹಾಗೂ 24ರಂದು ತಂದೆಗೆ ಕರೆ ಮಾಡಿರುವ ಮಕ್ಕಳು "ನೀನು ಮತ್ತು ನಿನ್ನ ತಮ್ಮ ನನ್ನ ಮನೆಯಲ್ಲಿರಬೇಡಿ ಎಂದು ಹೇಳಿ ಹೊಡೆಯುತ್ತಾರೆ. ನನ್ನ ಕೈ ಕಚ್ಚಿ, ಮೈಮೇಲೆ ತಣ್ಣೀರೆರಚಿದ್ದಾರೆ. ಸಲೀಂ ಅಂಕಲ್ ನಮ್ಮನ್ನು ಸಿಗರೇಟಿನಿಂದ ಸುಟ್ಟಿದ್ದಾರೆ. ಅಲ್ಲದೆ, ನಾನು ಮನೆಗೆ ಬರುವುದನ್ನು ನಿನ್ನ ತಂದೆಗೆ ಹೇಳಿದರೆ ಸಾಯಿಸುವುದಾಗಿ ಬೆದರಿಸುತ್ತಾರೆ" ಎಂದು ಹೇಳುತ್ತಾರೆಂದು ಹೇಳಿದ್ದಾರೆ.

ಮಕ್ಕಳ ಮಾತನ್ನು ಕೇಳಿದ ಇಮ್ರಾನ್ ಖಾನ್ ಕೂಡಲೇ ಪತ್ನಿಯ ಮನೆಗೆ ತೆರಳಿದ್ದು, ಮಕ್ಕಳಿಬ್ಬರನ್ನೂ ತನ್ನ ಸುಪರ್ದಿಗೆ ಪಡೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಪತ್ನಿ ಆಯೀಶಾ, ಆಕೆಯ ಪ್ರಿಯಕರನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ

ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಕ್ರೋಶಕ್ಕೆ ಸಾಕ್ಷಿ: ಬಿ.ವೈ. ವಿಜಯೇಂದ್ರ

'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!

ನಾಗ್ಪುರದಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಘರ್ಷಣೆ: ಒಬ್ಬ ಸಾವು

ನಮ್ಮ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ವೈಷ್ಣವ್ ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ: ಸಿದ್ದರಾಮಯ್ಯ

SCROLL FOR NEXT