ಸಾಂದರ್ಭಿಕ ಚಿತ್ರ  
ರಾಜ್ಯ

ಚಿಕ್ಕಮಗಳೂರು: ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.

17 ಕಾರಣಗಳನ್ನು ನೀಡಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, . ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.

ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಮಂಜುನಾಥ್​ ವಿರುದ್ಧು 17 ಕ್ರಿಮಿನಲ್ ಪ್ರಕರಣಗಳು ಮತ್ತು 7 ಮುಂಜಾಗ್ರತಾ ಪ್ರಕರಣಗಳು ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಅವರಲ್ಲಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ.

ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ