ಸಾಂದರ್ಭಿಕ ಚಿತ್ರ  
ರಾಜ್ಯ

ಚಿಕ್ಕಮಗಳೂರು: ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.

17 ಕಾರಣಗಳನ್ನು ನೀಡಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, . ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.

ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಮಂಜುನಾಥ್​ ವಿರುದ್ಧು 17 ಕ್ರಿಮಿನಲ್ ಪ್ರಕರಣಗಳು ಮತ್ತು 7 ಮುಂಜಾಗ್ರತಾ ಪ್ರಕರಣಗಳು ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಅವರಲ್ಲಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ.

ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT