ರಾಮಮಂದಿರ ಸ್ಫೋಟ ಬೆದರಿಕೆ ಪತ್ರ 
ರಾಜ್ಯ

ಚಿಕ್ಕೋಡಿ: ರಾಮಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರ ಪತ್ತೆ, ತೀವ್ರ ತನಿಖೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಇತ್ತ ರಾಮಮಂದಿರ ಸ್ಫೋಟಿಸುವುದಾಗಿ ಹೇಳಿ ಬೆದರಿಕೆ ಪತ್ರ ಲಭಿಸಿರುವ ಘಟನೆ ವರದಿಯಾಗಿದೆ.

ಚಿಕ್ಕೋಡಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಇತ್ತ ರಾಮಮಂದಿರ ಸ್ಫೋಟಿಸುವುದಾಗಿ ಹೇಳಿ ಬೆದರಿಕೆ ಪತ್ರ ಲಭಿಸಿರುವ ಘಟನೆ ವರದಿಯಾಗಿದೆ.

ಚಿಕ್ಕೋಡಿಯ ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ. ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಮತ್ತೊಂದು ಪತ್ರ ಪತ್ತೆಯಾಗಿದೆ.

ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿಸಿಟಿವಿ ಅಳವಡಿಸಲಾಗಿದೆ.

ಪತ್ರದಲ್ಲೇನಿದೆ?

‘ಅಲ್ಲಾಹು ಅಕ್ಬರ್’ ಎಂಬ ಬರಹ ಇದೆ ಎನ್ನಲಾಗಿದೆ. “ನಿಮ್ಮ ರಾಮಮಂದಿರ ಸ್ಫೋಟಿಸುತ್ತೇವೆ. ದೊಡ್ಡ ಪ್ರಮಾಣದಲ್ಲೇ ಸ್ಫೋಟಿಸುತ್ತೇವೆ… ಸುಧಾರಿಸಿಕೊಳ್ಳಿ” ಅಂತ ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ. ಫೆಬ್ರವರಿ 29 ಹಾಗೂ 28ರ ದಿನಾಂಕದಲ್ಲಿ ಪತ್ರ ಬರೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಮುಂದಿನ 20 ಹಾಗೂ 21ನೇ ತಾರೀಖಿನ ಒಳಗಡೆ ಸ್ಫೋಟಿಸುವುದಾಗಿ ಅನಾಮಧೇಯ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಕಳೆದ ಫೆಬ್ರವರಿ 27 ಹಾಗೂ 28ರಂದೇ ದೇವಸ್ಥಾನದಲ್ಲಿ ಅನಾಮಧೇಯ ವ್ಯಕ್ತಿ ಬೆದರಿಕೆ ಪತ್ರ ಇಟ್ಟು ಹೋಗಿದ್ದಾನೆ ಎನ್ನಲಾಗಿದ್ದು, ಮುಂದಿನ 20 ಹಾಗೂ 21ನೇ ತಾರೀಖಿನ ಒಳಗೆ ಸ್ಫೋಟಿಸುತ್ತೇವೆ ಅಂತ ಬೆದರಿಕೆ ಒಡ್ಡಲಾಗಿದೆ.

ಪೊಲೀಸರಿಂದ ಬಿಗಿ ಭದ್ರತೆ

ಇನ್ನು ಬೆದರಿಕೆ ಪತ್ರ ಹಿನ್ನಲೆಯಲ್ಲಿ ನಿಪ್ಪಾಣಿ ಶಹರ ಪೊಲೀಸರು ಕಟ್ಟೆಚ್ಚರಿಕೆ ವಹಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಾಮ ಮಂದಿರದ ಆವರಣದಲ್ಲಿ 14 ಸಿಸಿಟಿವಿ ಅಳವಡಿಸಲಾಗಿದೆ. ಈ ಸಂಬಂಧ ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಚಿವರ ಪ್ರತಿಕ್ರಿಯೆ

ಇನ್ನು ಬೆದರಿಕೆ ಪತ್ರದ ವಿಚಾರಕ್ಕೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬೆದರಿಕೆ ಪತ್ರ, ಈ ಮೇಲ್ ಕಳುಹಿಸುತ್ತಾರೆ. ನಮ್ಮ ಪೊಲೀಸರು ಇಲಾಖೆ ಎಚ್ಚರಿಕೆ ವಹಿಸುತ್ತದೆ. ಜಿಲ್ಲೆಯಲ್ಲಿರುವ ಎಸ್‌ಪಿ ಆ ಭಾಗದ ಐಜಿ ವ್ಯವಸ್ಥಿತವಾಗಿ ಮಾಡಿಕೊಳ್ಳುತ್ತಾರೆ ಅಂತ ಹೇಳಿದ್ದಾರೆ. KSRTC ಎಂಡಿಗೆ ಆದೇಶ ಕೊಟ್ಟಿದ್ದೇನೆ. ಎಲ್ಲಾ ಲಗೆಜುಗಳು ತನಿಖೆ ಮಾಡ್ತಾರೆ. ಎಲ್ಲಾ ದೇವಸ್ಥಾನಗಳಿಗೂ ಸೂಕ್ತ ಭದ್ರತೆ ನೀಡಲು ಸೂಚನೆ ನೀಡುತ್ತೇನೆ ಅಂತ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಐಫೋನ್‌ಗಳ ಅಬ್ಬರ: ಭಾರತದ ಸ್ಮಾರ್ಟ್‌ಫೋನ್ ರಫ್ತು 10 ಬಿಲಿಯನ್ ಗೇರಿಕೆ, 'ಮೇಕ್ ಇನ್ ಇಂಡಿಯಾ'ಗೆ ಜಾಗತಿಕ ಮನ್ನಣೆ

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!