ಜನರಲ್ ಕೆ. ಎಸ್ ತಿಮ್ಮಯ್ಯ ಪ್ರತಿಮೆ 
ರಾಜ್ಯ

ಮಡಿಕೇರಿ: ಜನರಲ್ ತಿಮ್ಮಯ್ಯ ಪ್ರತಿಮೆ ಮರು ಸ್ಥಾಪನೆ

ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಮಡಿಕೇರಿ: ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಜಿಲ್ಲಾಡಳಿತ, ನಗರಸಭೆ ಉಸ್ತುವಾರಿಯಲ್ಲಿ ನಡೆದ ಕಾರ್ಯಕ್ರದಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುಷ್ಪನಮನದ ಮೂಲಕ ನಿವೃತ್ತದ ಏರ್ ಮಾರ್ಷಲ್ ನಂದಾ ಕಾರ್ಯಪ್ಪಮತ್ತು ಮಾಜಿ ಸಚಿವ ಎಂ.ಸಿ.ನಾಣಯ್ಯ ಅನಾವರಣಗೊಳಿಸಿದರು.

ನೂತನ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಐದು ದಶಕಗಳ ಹಿಂದೆ ಜ.ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕಾರಣರಾಗಿದ್ದ ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಜಿಲ್ಲಾಧಿಕಾರಿಗಳಾದ ವೆಂಕಟರಾಜ್, ಮಾಜಿ ಶಾಸಕ ಕೆಜಿ.ಬೋಪಯ್ಯ ವಿದಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷರಾದ ಕರ್ನಲ್ ಕೆ. ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಿ.ಎ ಕಾರ್ಯಪ್ಪ, ಮುಂತಾದವರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಏರ್ ಮಾರ್ಷಲ್ ಕರಿಯಪ್ಪ ಅವರು, ಜನರಲ್ ಕೆಎಸ್ ತಿಮ್ಮಯ್ಯ ಒಬ್ಬ ಶ್ರೇಷ್ಠ ಭಾರತೀಯ. ಅವರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. 51 ವರ್ಷಗಳ ಹಿಂದೆ ಮಡಿಕೇರಿಯಲ್ಲಿ 1973ರಲ್ಲಿ ಪ್ರತಿಮೆ ಸ್ಥಾಪನೆಯಾಗಿತ್ತು. ಇದಕ್ಕೆ ಮಾಜಿ ಎಂಎಲ್‌ಸಿ ಎಂ.ಸಿ.ನಾಣಯ್ಯ ಕಾರಣಕರ್ತರಾಗಿದ್ದಾರೆ. ಒಳ್ಳೆಯದೆಲ್ಲದರ ಸಾಕಾರರೂಪ ತಿಮ್ಮಯ್ಯ. ಭಾರತೀಯ ಎಂಬ ಅವರ ಧ್ಯೇಯವಾಕ್ಯವನ್ನು ನಾವೆಲ್ಲರೂ ಅನುಸರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮೇಜರ್ ಬಾಚಮಾಡ ಕಾರಿಯಪ್ಪ (ನಿವೃತ್ತ) ಮಾತನಾಡಿ, ಜನರಲ್ ತಿಮ್ಮಯ್ಯ ಅವರು ಅಮರರಾಗಿ ಉಳಿದಿದ್ದಾರೆಂದು ಹೇಳಿದರು.

ಕರ್ನಲ್ ಕೆ ಸುಬ್ಬಯ್ಯ (ನಿವೃತ್ತ) ಅವರು ಮಾತನಾಡಿ, ಪ್ರತಿಮೆಯ ಪುನರ್ ಪ್ರತಿಷ್ಠಾಪನೆಗೆ ಕಾರಣವಾದ ಸಂಸ್ಥೆಗಳನ್ನು ಅಭಿನಂದಿಸಿದರು. ಜನರಲ್ ತಿಮ್ಮಯ್ಯ ತಮ್ಮ ಸ್ಥಾನಕ್ಕೆ ಮರಳಿದ್ದು, ಮಡಿಕೇರಿಯನ್ನು ಕಾಯುತ್ತಿದ್ದಾರೆಂದು ಹೇಳಿದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಸಂದರ್ಭದಲ್ಲಿ ಪ್ರತಿಮೆಗೆ ಹಾನಿಯಾಗಿತ್ತು. ಬಳಿಕ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರತಿಮೆಯನ್ನು ಸರಿಪಡಿಸಿದ್ದರು. ನಂತರ ಪ್ರತಿಮೆಯನ್ನು ಮೈಸೂರಿನಿಂದ ಮೆರವಣಿಗೆಯಲ್ಲಿ ತರಲಾಯಿತು. ಮೆರವಣಿಗೆಯಲ್ಲಿ ಹಲವಾರು ಯುವಕರು ಪಾಲ್ಗೊಂಡಿದ್ದರು.

ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಡಿಸಿ ವೆಂಕಟ್ ರಾಜ, ಎಸ್ಪಿ ಕೆ.ರಾಮರಾಜನ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT