ಜನರಲ್ ಕೆ. ಎಸ್ ತಿಮ್ಮಯ್ಯ ಪ್ರತಿಮೆ 
ರಾಜ್ಯ

ಮಡಿಕೇರಿ: ಜನರಲ್ ತಿಮ್ಮಯ್ಯ ಪ್ರತಿಮೆ ಮರು ಸ್ಥಾಪನೆ

ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಮಡಿಕೇರಿ: ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಸಕಲ ಗೌರವದೊಂದಿಗೆ ಮಡಿಕೇರಿಯ ನೇಮಸೇಕ್ ವೃತ್ತದಲ್ಲಿ ಶುಕ್ರವಾರ ಮರು ಸ್ಥಾಪಿಸಲಾಯಿತು.

ಜಿಲ್ಲಾಡಳಿತ, ನಗರಸಭೆ ಉಸ್ತುವಾರಿಯಲ್ಲಿ ನಡೆದ ಕಾರ್ಯಕ್ರದಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುಷ್ಪನಮನದ ಮೂಲಕ ನಿವೃತ್ತದ ಏರ್ ಮಾರ್ಷಲ್ ನಂದಾ ಕಾರ್ಯಪ್ಪಮತ್ತು ಮಾಜಿ ಸಚಿವ ಎಂ.ಸಿ.ನಾಣಯ್ಯ ಅನಾವರಣಗೊಳಿಸಿದರು.

ನೂತನ ಪ್ರತಿಮೆ ಅನಾವರಣದ ಸಂದರ್ಭದಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಐದು ದಶಕಗಳ ಹಿಂದೆ ಜ.ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕಾರಣರಾಗಿದ್ದ ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಜಿಲ್ಲಾಧಿಕಾರಿಗಳಾದ ವೆಂಕಟರಾಜ್, ಮಾಜಿ ಶಾಸಕ ಕೆಜಿ.ಬೋಪಯ್ಯ ವಿದಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷರಾದ ಕರ್ನಲ್ ಕೆ. ಸುಬ್ಬಯ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಿ.ಎ ಕಾರ್ಯಪ್ಪ, ಮುಂತಾದವರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಏರ್ ಮಾರ್ಷಲ್ ಕರಿಯಪ್ಪ ಅವರು, ಜನರಲ್ ಕೆಎಸ್ ತಿಮ್ಮಯ್ಯ ಒಬ್ಬ ಶ್ರೇಷ್ಠ ಭಾರತೀಯ. ಅವರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. 51 ವರ್ಷಗಳ ಹಿಂದೆ ಮಡಿಕೇರಿಯಲ್ಲಿ 1973ರಲ್ಲಿ ಪ್ರತಿಮೆ ಸ್ಥಾಪನೆಯಾಗಿತ್ತು. ಇದಕ್ಕೆ ಮಾಜಿ ಎಂಎಲ್‌ಸಿ ಎಂ.ಸಿ.ನಾಣಯ್ಯ ಕಾರಣಕರ್ತರಾಗಿದ್ದಾರೆ. ಒಳ್ಳೆಯದೆಲ್ಲದರ ಸಾಕಾರರೂಪ ತಿಮ್ಮಯ್ಯ. ಭಾರತೀಯ ಎಂಬ ಅವರ ಧ್ಯೇಯವಾಕ್ಯವನ್ನು ನಾವೆಲ್ಲರೂ ಅನುಸರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮೇಜರ್ ಬಾಚಮಾಡ ಕಾರಿಯಪ್ಪ (ನಿವೃತ್ತ) ಮಾತನಾಡಿ, ಜನರಲ್ ತಿಮ್ಮಯ್ಯ ಅವರು ಅಮರರಾಗಿ ಉಳಿದಿದ್ದಾರೆಂದು ಹೇಳಿದರು.

ಕರ್ನಲ್ ಕೆ ಸುಬ್ಬಯ್ಯ (ನಿವೃತ್ತ) ಅವರು ಮಾತನಾಡಿ, ಪ್ರತಿಮೆಯ ಪುನರ್ ಪ್ರತಿಷ್ಠಾಪನೆಗೆ ಕಾರಣವಾದ ಸಂಸ್ಥೆಗಳನ್ನು ಅಭಿನಂದಿಸಿದರು. ಜನರಲ್ ತಿಮ್ಮಯ್ಯ ತಮ್ಮ ಸ್ಥಾನಕ್ಕೆ ಮರಳಿದ್ದು, ಮಡಿಕೇರಿಯನ್ನು ಕಾಯುತ್ತಿದ್ದಾರೆಂದು ಹೇಳಿದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಸಂದರ್ಭದಲ್ಲಿ ಪ್ರತಿಮೆಗೆ ಹಾನಿಯಾಗಿತ್ತು. ಬಳಿಕ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಪ್ರತಿಮೆಯನ್ನು ಸರಿಪಡಿಸಿದ್ದರು. ನಂತರ ಪ್ರತಿಮೆಯನ್ನು ಮೈಸೂರಿನಿಂದ ಮೆರವಣಿಗೆಯಲ್ಲಿ ತರಲಾಯಿತು. ಮೆರವಣಿಗೆಯಲ್ಲಿ ಹಲವಾರು ಯುವಕರು ಪಾಲ್ಗೊಂಡಿದ್ದರು.

ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಡಿಸಿ ವೆಂಕಟ್ ರಾಜ, ಎಸ್ಪಿ ಕೆ.ರಾಮರಾಜನ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT