ಎನ್ಐಎ 
ರಾಜ್ಯ

ಶಿವಮೊಗ್ಗ ಇಸಿಸ್ ಪಿತೂರಿ, ಮಂಗಳೂರು ಗೋಡೆ ಬರಹ ಪ್ರಕರಣ: ಎನ್ಐಎಯಿಂದ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಬೆಂಗಳೂರು: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಂಗಳೂರಿನ ಎರಡು ಕಡೆ ಗೋಡೆ ಬರಹ ಬರೆಯಲು ಮೊಹಮ್ಮದ್ ಶಾರೀಕ್ ಮತ್ತು ಮಾಝ್ ಮುನೀರ್ ಗೆ ಪ್ರೇರಣೆ ನೀಡಿದ್ದ ಅರಾಫತ್ ಆಲಿ ಮತ್ತು ಇತರ ಇಬ್ಬರ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

ಅರಾಫತ್, ಕೆಲ ಯುವಕರನ್ನು ಮತೀಯವಾದಕ್ಕೆ ಸೆಳೆದು ಅವರ ಮೂಲಕ ಮಂಗಳೂರಿನಲ್ಲಿ ಗೋಡೆ ಬರಹ ಬರೆಸಿದ್ದ. ಪ್ರಕರಣದಲ್ಲಿ ನಾಪತ್ತೆಯಾಗಿರುವ ಅಬ್ದುಲ್ ಮಥೀನ್ ತಾಹ ಮತ್ತು ಮಸ್ಸವೀರ್ ಹುಸ್ಸೇನ್ ಶಹಬೇಜ್'ನ ಸೂಚನೆಯಂತೆ ಅರಾಫತ್ ಈ ಕೆಲಸ ಮಾಡಿದ್ದ. ಶಾರೀಖ್ ಅಹ್ಮದ್ ಎಂಬಾರತನ ಮೂಲಕ ಈ ಗೋಡೆ ಬರಹ ಬರೆಸಿದದ. ಗೋಡ ಬರಹ ಬರೆದವರಿಗೆ ವಿದೇಶಗಳಿಂದ ಸ್ವೀಕರಿಸಿದ ಕ್ರಿಪ್ಟೋಕರೆನ್ಸಿ ಹಣವನ್ನು ಬಳಸಿಕೊಂಡು ಹಣ ಪಾವತಿಸಿದ್ದ ಎಂದು ಎನ್ಐಎ ಆರೋಪಿಸಿದೆ.

ಅರಾಫತ್'ನ ಕಳೆದ ಸೆ.14ರಂದು ಕೀನ್ಯಾದಿಂದ ಆಗಮಿಸಿದ ವೇಳೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಇದಲ್ಲದೇ ಇದೇ ಪ್ರಕರಣ ಸಂಬಂಧ ಮಾಝ್ ಮುನೀರ್ ಅಹ್ಮದ್ ಹಾಗೂ ಮೊಹಮ್ಮದ್ ಶಾರೀಖ್ ವಿರುದ್ಧವೂ ಆರೋಪಪಟ್ಟಿ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

U19 ಏಷ್ಯಾ ಕಪ್ ಫೈನಲ್‌: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳ

SCROLL FOR NEXT