ನಟ ದರ್ಶನ್(ಸಂಗ್ರಹ ಚಿತ್ರ) 
ರಾಜ್ಯ

'ಸುಮಲತಾ ಅವರು ನಮ್ಮ ಅಮ್ಮ, ಅವರ ಜೊತೆ ನಾನು ಯಾವಾಗಲೂ ಇರುತ್ತೇನೆ': ನಟ ದರ್ಶನ್

ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ ದರ್ಶನ್ ತೂಗುದೀಪ

ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಅವರ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಹೇಳುವ ಮೂಲಕ ಈ ಬಾರಿ ಕೂಡ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಷ್ ಪರ ಪ್ರಚಾರ ನಡೆಸುವುದಾಗಿ ನಟ ದರ್ಶನ್ ತಿಳಿಸಿದ್ದಾರೆ.

ಅವರು ಇಂದು ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹೆತ್ತ ತಾಯಿಯನ್ನು ಎಂದಾದರೂ ಹಿಟ್ಟು ಕೊಡಲಿಕ್ಕಾಗುತ್ತದೆಯೇ, ಮೊನ್ನೆಯವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅವರ ಕೈಬಿಟ್ಟರೆ ಆಗುತ್ತದೆಯೇ ಸರ್, ನಿಮ್ಮ ಮನೆಯಲ್ಲಿ ನಿಮ್ಮ ತಾಯಿಯನ್ನು ಬಿಟ್ಟು ಬಿಡುತ್ತೀರಾ, ಸುಮಲತಾ ಅಮ್ಮ ಅಮ್ಮನೇ ಸಾರ್ ಎಂದರು.

ಅಮ್ಮ ಅಮ್ಮನೇ ಅವಳೊಂದಿಗೆನೇ‌ ಇರೋದು. ಬೇರೆಯವರಿಗಾಗಿ ಅಮ್ಮನನ್ನು ಬಿಡೋಕಾಗುತ್ತಾ? ಎಂದು ಪ್ರಶ್ನಿಸಿದ್ದಾರೆ ದರ್ಶನ್. ಕುತ್ತಾರು ಕೊರಗಜ್ಜ ಕ್ಷೇತ್ರದ ಮಹಿಮೆ ಬಗ್ಗೆ ಎಲ್ಲರೂ ಹೇಳುತ್ತಿದ್ದರು. ಅದಕ್ಕೆ ಒಂದು ಬಾರಿ ಹೋಗಿ ಕೊರಗಜ್ಜನಲ್ಲಿ ಪ್ರಾರ್ಥನೆ ಮಾಡಿಕೊಂಡು ಬರೋಣವೆಂದು ಬಂದಿದ್ದೇನೆ, ಬೇರೇನು ಕಾರಣವಿಲ್ಲ ಎಂದಷ್ಟೇ ಹೇಳಿದರು. ದರ್ಶನ್ ಗೆ ನಟ ಚಿಕ್ಕಣ್ಣ ಹಾಗು ಯಶಸ್ ಸೂರ್ಯ ಸಾಥ್ ನೀಡಿದ್ದರು.

ಈ ಹಿಂದೆ ಮಾಲಾಶ್ರೀ, ಶಿವರಾಜ್​ಕುಮಾರ್, ನಟಿ ರಕ್ಷಿತಾ, ರಚಿತಾ ರಾಮ್, ಅವರು ಕೊರಗಜ್ಜನ ಸನ್ನಿಧಿಗೆ ಭೇಟಿ ಕೊಟ್ಟಿದ್ದರು. ಇತ್ತೀಚೆಗೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಹೆಚ್ಚಾಗಿ ಕುತ್ತಾರಿಗೆ ಭೇಟಿ ಕೊಡುತ್ತಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT