ಈಶ್ವರ ಖಂಡ್ರೆ 
ರಾಜ್ಯ

ಆನೆ ಕಾಲ್ತುಳಿತದಿಂದ ವ್ಯಕ್ತಿ ಸಾವು: ಕರ್ನಾಟಕ ಸರ್ಕಾರದ 15ಲಕ್ಷ ರೂ ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ

ಕರ್ನಾಟಕದ ಕಾಡಾನೆ (Karnataka Elephant) ದಾಳಿಗೆ ಬಲಿಯಾಗಿದ್ದ ಕೇರಳದ ವ್ಯಕ್ತಿಯ (Kerala Man) ಕುಟುಂಬಕ್ಕೆ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದ 15 ಲಕ್ಷ ರೂಗಳ ಪರಿಹಾರವನ್ನು ಸಂತ್ರಸ್ಥನ ಕುಟುಂಬಸ್ಥರು ತಿರಸ್ಕರಿಸಿದ್ದಾರೆ.

ಚಾಮರಾಜನಗರ: ಕರ್ನಾಟಕದ ಕಾಡಾನೆ (Karnataka Elephant) ದಾಳಿಗೆ ಬಲಿಯಾಗಿದ್ದ ಕೇರಳದ ವ್ಯಕ್ತಿಯ (Kerala Man) ಕುಟುಂಬಕ್ಕೆ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದ 15 ಲಕ್ಷ ರೂಗಳ ಪರಿಹಾರವನ್ನು ಸಂತ್ರಸ್ಥನ ಕುಟುಂಬಸ್ಥರು ತಿರಸ್ಕರಿಸಿದ್ದಾರೆ.

ಆನೆ ಕಾಲ್ತುಳಿತ ಪ್ರಕರಣದಲ್ಲಿ, ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಸಂತ್ರಸ್ತ ಕುಟುಂಬ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Eshwara Khandre) ತಿಳಿಸಿದ್ದಾರೆ. ಈ ಕುರಿತು ಬಂಡೀಪುರದಲ್ಲಿ (Bandipur) ಮಾತನಾಡಿದ ಅವರು, ನಾವು ಮಾನವೀಯತೆಯಿಂದ ಪರಿಹಾರ ಘೋಷಣೆ ಮಾಡಿದ್ದೆವು. ಆದರೆ ಸಂತ್ರಸ್ತ ಕುಟುಂಬವು ಪರಿಹಾರ ಬೇಡವೆಂದು ತಿರಸ್ಕರಿಸಿದೆ ಎಂದಿದ್ದಾರೆ.

ಬಿಜೆಪಿ ವಿರೋಧದಿಂದ ಪರಿಹಾರ ತಿರಸ್ಕರಿಸಿದ ಕುಟುಂಬ

ನಾವು ಮಾನವೀಯತೆಯಿಂದ ಪರಿಹಾರ ಘೋಷಿಸಿದ್ದೆವು. ಆದರೆ ಪರಿಹಾರ ನೀಡಲು ಬಿಜೆಪಿ ವಿರೋಧ ಮಾಡಿತ್ತು. ಬಿಜೆಪಿ ವಿರೋಧ ಮಾಡಿದ್ದರಿಂದ ನಮಗೆ ಪರಿಹಾರ ಬೇಕಿಲ್ಲ ಎಂದು ಸಂತ್ರಸ್ತನ ಕುಟುಂಬ ತಿರಸ್ಕರಿಸಿದೆ ಎಂದು ಖಂಡ್ರೆ ಮಾಹಿತಿ ನೀಡಿದ್ದಾರೆ.

ಅಂದಹಾಗೆ ಈ ಹಿಂದೆ ಕೇರಳದಲ್ಲಿ (Kerala) ಕರ್ನಾಟಕದ ಆನೆ ತುಳಿತದಿಂದಾಗಿ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು. ಕೇರಳದ ವ್ಯಕ್ತಿ ಮೃತಪಟ್ಟಿರುವುದಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಘೋಷಿಸಲಾಗಿತ್ತು. ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಪರಿಹಾರ ಘೋಷಣೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT