ವಾಹನಗಳಿಗೆ, ಎಪಿಎಂಸಿ ಕಚೇರಿಗೆ ಬೆಂಕಿ 
ರಾಜ್ಯ

ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತ: ಆಕ್ರೋಶಗೊಂಡ ರೈತರಿಂದ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರ ಧ್ವಂಸಗೊಳಿಸಿ, ಕಲ್ಲುತೂರಾಟ ನಡೆಸಿದ್ದಾರೆ.

ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಪಟ್ಟಣದ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರ ಧ್ವಂಸಗೊಳಿಸಿ, ಕಲ್ಲುತೂರಾಟ ನಡೆಸಿ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಮೆಣಸಿನಕಾಯಿ ಬೆಲೆ ದಿಢೀರ್ ಇಳಿಕೆಯಾಗಿದ್ದರಿಂದ ರೊಚ್ಚಿಗೆದ್ದ ರೈತರು ಎಪಿಎಂಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ನಂತರ ಆವರಣದಲ್ಲಿ ನಿಂತಿದ್ದ ಎಪಿಎಂಸಿ ಅಧ್ಯಕ್ಷರ ಕಾರಿನ ಮೇಲೂ ಕಲ್ಲು ತೂರಿದ್ದಾರೆ. ಅಲ್ಲದೆ ಹಲವು ವಾಹನಗಳಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದುವರೆಗೆ 12 ವಾಹನಗಳನ್ನು ರೈತರು ಸುಟ್ಟು ಹಾಕಿದ್ದಾರೆ. 1 ಅಗ್ನಿಶಾಮಕ ವಾಹನ ಸಹ ಬೆಂಕಿಗೆ ಆಹುತಿ ಆಗಿದೆ. ಒಟ್ಟು 3 ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇವೆ.

ರೈತರು ಮೆಣಸಿನಕಾಯಿಗೂ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದಾರೆ. ಮಾರ್ಕೆಟ್​ನಲ್ಲಿ ದಟ್ಟಹೊಗೆಯಿಂದ ಸಾರ್ವಜನಿಕರ ಉಸಿರಾಟಕ್ಕೆ ಸಮಸ್ಯೆ ಉಂಟಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.

ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂ. ಇತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂಪಾಯಿಗೆ ಕುಸಿದ ಹಿನ್ನೆಲೆಯಲ್ಲಿ ಬ್ಯಾಡಗಿ ಎಪಿಎಂಸಿ ಕಚೇರಿಯಲ್ಲಿದ್ದ ಪೀಠೋಪಕರಣ ಧ್ವಂಸ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT