ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯದಲ್ಲಿ 600 ಇಂದಿರಾ ಕ್ಯಾಂಟೀನ್‌ ತೆರೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ''ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದರು.

“ನಾವು ಬೆಂಗಳೂರಿನಲ್ಲಿ ಒಟ್ಟು 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ 40 ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿದೆ. ಈಗಾಗಲೇ ಒಂದು ಉದ್ಘಾಟನೆಗೊಂಡಿದ್ದು, ಇನ್ನೊಂದು ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಬರಲಿದೆ. ಬಡವರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಹಾರದ ಮೆನು ಕೂಡ ಬದಲಾವಣೆ ಮಾಡಲಾಗಿದ್ದು, ಊಟದ ಹಾಲ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿಯೂ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು. ಹಿಂದಿನ ಸರ್ಕಾರ ಊಟ ನೀಡದೆ ಕೆಲವನ್ನು ಮುಚ್ಚಲಾಗಿದೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು ಎಂಬ ಕಾರಣಕ್ಕೆ ನಾವು ಈ ಕಾರ್ಯಕ್ರಮವನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT