ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯದಲ್ಲಿ 600 ಇಂದಿರಾ ಕ್ಯಾಂಟೀನ್‌ ತೆರೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ''ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದರು.

“ನಾವು ಬೆಂಗಳೂರಿನಲ್ಲಿ ಒಟ್ಟು 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆ ಇತ್ತು. ಹೀಗಾಗಿ ಇಲ್ಲಿ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಗಳ ಪೈಕಿ ಈಗಾಗಲೇ 40 ಪೂರ್ಣಗೊಂಡಿದ್ದು, ಉಳಿದವು ಪ್ರಗತಿಯಲ್ಲಿವೆ ಎಂದು ಸಿಎಂ ತಿಳಿಸಿದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿದೆ. ಈಗಾಗಲೇ ಒಂದು ಉದ್ಘಾಟನೆಗೊಂಡಿದ್ದು, ಇನ್ನೊಂದು ಇಂದಿರಾ ಕ್ಯಾಂಟೀನ್ ಶೀಘ್ರದಲ್ಲೇ ಬರಲಿದೆ. ಬಡವರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆಹಾರದ ಮೆನು ಕೂಡ ಬದಲಾವಣೆ ಮಾಡಲಾಗಿದ್ದು, ಊಟದ ಹಾಲ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಂಗಳೂರಿನ ಪ್ರತಿ ವಾರ್ಡ್‌ಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿಯೂ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು. ಹಿಂದಿನ ಸರ್ಕಾರ ಊಟ ನೀಡದೆ ಕೆಲವನ್ನು ಮುಚ್ಚಲಾಗಿದೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು ಎಂಬ ಕಾರಣಕ್ಕೆ ನಾವು ಈ ಕಾರ್ಯಕ್ರಮವನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?