ತೋಟದ ಮನೆಯಲ್ಲಿ ಪತ್ತೆಯಾದ ಬುರುಡೆಗಳು 
ರಾಜ್ಯ

ರಾಮನಗರ: ತೋಟದ ಮನೆಯಲ್ಲಿ 20 ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಪತ್ತೆ; ವ್ಯಕ್ತಿ ವಶಕ್ಕೆ

ಜೋಗರದೊಡ್ಡಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಸೋಮವಾರ ಪತ್ತೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಲರಾಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ರಾಮನಗರ :ಜೋಗರದೊಡ್ಡಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ಬುರುಡೆಗಳು ಸೋಮವಾರ ಪತ್ತೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಲರಾಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ತಲೆಬುರುಡೆಗಳು ಪತ್ತೆಯಾಗಿದ್ದು, ಬಲರಾಮ್‌ ಎಂಬಾತನಿಗೆ ಸೇರಿದ ಈ ತೋಟದ ಮನೆಯಲ್ಲಿ ಪತ್ತೆಯಾಗಿರುವ ತಲೆಬುರುಡೆಗಳನ್ನು ಒಂದೇ ಕೋಣೆಯಲ್ಲಿ ಸಂಗ್ರಹಿಸಿ ಇಡಲಾಗಿದ್ದು ಇದರ ಹಿನ್ನೆಲೆ ಬೆಚ್ಚಿ ಬೀಳಿಸುವಂತಿದೆ.

ತೋಟದ ಮನೆಯಲ್ಲಿರುವ ಈ ತಲೆ ಬುರುಡೆಗಳಿಗೆ ನಿತ್ಯ ಪೂಜೆ ಮಾಡಲಾಗುತ್ತದೆ. ಈ ಮೂಲಕ ಬಲರಾಮ ಕಂಡ ಕಂಡವರ ಮೇಲೆ ಮಾಟ ಮಂತ್ರ ಮಾಡುತ್ತಾನೆ ಎಂದು ಆರೋಪಿಸಲಾಗಿದೆ. ಗ್ರಾಮಸ್ಥರು ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನನ್ನು ಠಾಣೆಗೆ ಕರೆದುಕೊಂಡು ಬಂಧಿಸಿದ್ದಾರೆ.

ಬಲರಾಮ ಈ ತಲೆಬುರುಡೆಗಳನ್ನು ಎಲ್ಲಿಂದ ತರುತ್ತಾನೆ? ಆತನೇ ಕೊಲೆ ಮಾಡಿ ತಲೆಬುರುಡೆ ಸಂಗ್ರಹ ಮಾಡಿದ್ದಾನೆ ಎಂಬ ಸಂಶಯಗಳು ಸಾರ್ವಜನಿಕರಿಗೆ ಇದೆ. ಪೊಲೀಸರು ಈ ಬಗ್ಗೆ ಬಲರಾಮನನ್ನು ವಿಚಾರಿಸಿದಾಗ, ಇದು ಆತ ಸ್ಮಶಾನದಿಂದ ಸಂಗ್ರಹಿಸಿದ ತಲೆಬುರುಡೆ ಎಂದು ತಿಳಿದುಬಂದಿದೆ.

ಗ್ರಾಮಸ್ಥರ ದೂರಿನ ಮೇರೆಗೆ ತೋಟದ ಮನೆಗೆ ಭೇಟಿ ನೀಡಿದಾಗ, ಬುರುಡೆಗಳು ಹಾಗೂ ಮೂಳೆಗಳು ಪತ್ತೆಯಾಗಿವೆ. ಭದ್ರಕಾಳಿ ಫೋಟೊ, ಹೋಮಕುಂಡದ ಸುತ್ತ ಬುರುಡೆಗಳನ್ನು ಜೋಡಿಸಿ ಪೂಜೆ ಮಾಡಲಾಗಿದೆ. ಈತ ಕೆಲ ವರ್ಷಗಳಿಂದ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ತಾನು ಪೂಜೆ ಮಾಡುತ್ತಿರುವುದು ಹೊಸದೇನಲ್ಲ. ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡ್ತೇವೆ ಎಂದು ಬಲರಾಮ ಹೇಳುತ್ತಿದ್ದಾನೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT