ಅಪ್ರಾಪ್ರೆಯ ಮೇಲೆ ಅತ್ಯಾಚಾರ ಪ್ರಕರಣ : ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು 
ರಾಜ್ಯ

ಶೃಂಗೇರಿ ಪ್ರಕರಣ: ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಶೃಂಗೇರಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ನ್ಯಾಯಾಲಯ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಚಿಕ್ಕಮಗಳೂರು: 2021ರಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ನ್ಯಾಯಾಲಯ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಪೋಕ್ಸೋ ಪ್ರಕರಣದ ಒಟ್ಟು 53 ಆರೋಪಿಗಳಲ್ಲಿ 49 ಜನರನ್ನು ಖಲಾಸೆಗೊಳಿಸಿ, ನಾಲ್ವರು ತಪ್ಪಿತಸ್ಥರೆಂದು ಕಳೆದ ಗುರುವಾರ ತೀರ್ಪು ನೀಡಿದ್ದ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.

ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು, ಸಂತ್ರಸ್ತೆ ಬಾಲಕಿ ತಾಯಿ ಗೀತಾ ಮತ್ತು ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್​​, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ ತಲಾ 25 ಸಾವಿರ ದಂಡ ಹಾಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ಶೃಂಗೇರಿ ತಾಲೂಕಿನಲ್ಲಿ ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಈ ಪೋಕ್ಸೋ ಪ್ರಕರಣ 2021ರಲ್ಲಿ ಭಾರೀ ಸುದ್ದಿಯಾಗಿತ್ತು. ತಾಯಿಯ ಕಿರುಕುಳ ತಾಳಲಾರದೆ ಬಾಲಕಿ ವೇಶ್ಯಾವಾಟಿಕೆ ಒಪ್ಪಿದ್ದಳು. ಹೀಗಾಗಿ 2020ರ ಸೆಪ್ಟೆಂಬರ್ 1 ರಿಂದ 2021ರ ಜನವರಿ 27ರ ವರೆಗೂ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆದಿತ್ತು.

ಕೊನೆಗೆ ಶೃಂಗೇರಿ ತಾಲೂಕಿನ ಕುಂಚೆಬೈಲ್ ಸಮೀಪದ ಗೋಚವಲ್ಲಿ ಗ್ರಾಮದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ 2021ರಲ್ಲಿ ಪೊಲೀಸರು ದಾಳಿ ಮಾಡಿ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿದ್ದರು. ಈ ಒಂದೇ ಅತ್ಯಾಚಾರ ಪ್ರಕರಣದಲ್ಲಿ ಶೃಂಗೇರಿ ಪೊಲೀಸರು 53 ಜನರನ್ನು ಬಂಧಿಸಿ ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್ ಶೀಟ್ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT