ಪ್ರಾತಿನಿಧಿಕ ಚಿತ್ರ 
ರಾಜ್ಯ

ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಟೆಕ್ ಉದ್ಯೋಗಿಗಳು ಮುಂದು; ನೀರಿನ ಕೊರತೆ ಇಲ್ಲ ಎಂದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು, ಅನೇಕ ಟೆಕ್ ಉದ್ಯೋಗಿಗಳು ತಾತ್ಕಾಲಿಕವಾಗಿ ನಗರವನ್ನು ತೊರೆಯುತ್ತಿದ್ದಾರೆ ಮತ್ತು ಅನೇಕರು ಹುಟ್ಟೂರುಗಳಿಗೆ ಹೋಗುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ಕೊರತೆ ಇಲ್ಲ, ನಗರದಲ್ಲಿ ನೀರಿನ ಕೊರತೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು, ಅನೇಕ ಟೆಕ್ ಉದ್ಯೋಗಿಗಳು ತಾತ್ಕಾಲಿಕವಾಗಿ ನಗರವನ್ನು ತೊರೆಯುತ್ತಿದ್ದಾರೆ ಮತ್ತು ಅನೇಕರು ಹುಟ್ಟೂರುಗಳಿಗೆ ಹೋಗುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ಕೊರತೆ ಇಲ್ಲ, ನಗರದಲ್ಲಿ ನೀರಿನ ಕೊರತೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದೆ.

ನಗರದಲ್ಲಿ ನೀರಿನ ಬಿಕ್ಕಟ್ಟು ಎಷ್ಟರ ಮಟ್ಟಿಗೆ ತಲೆದೋರಿದೆ ಎಂದರೆ ಬಹುರಾಷ್ಟ್ರೀಯ ಸಂಸ್ಥೆಗಳ ಅನೇಕ ಟೆಕ್ ಉದ್ಯೋಗಿಗಳು ಮೈಸೂರಿನಲ್ಲಿ ಆಶ್ರಯ ಪಡೆದಿದ್ದಾರೆ.

ಡೆಕ್ಕನ್ ಹೆರಾಲ್ಡ್ ಜೊತೆ ಮಾತನಾಡಿದ ಕೆಆರ್ ಪುರಂನ ಅಯ್ಯಪ್ಪ ನಗರದಲ್ಲಿ ವಾಸವಾಗಿರುವ ಉದ್ಯೋಗಿ ಸುಮಂತ, ತಾವು ಮತ್ತು ತಮ್ಮ ಪತ್ನಿ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ತೀವ್ರ ನೀರಿನ ಕೊರತೆಯನ್ನು ಎದುರಿಸುತ್ತಿದ್ದು, ಮೂಲಭೂತ ಅವಶ್ಯಕತೆಗಳಿಗಾಗಿಯೂ ಹೆಣಗಾಡುತ್ತಿದ್ದೇವೆ ಎನ್ನುತ್ತಾರೆ.

ನಗರದಲ್ಲಿ ಉಂಟಾಗಿರುವ ನೀರಿನ ಸಮಸ್ಯೆಯಿಂದಾಗಿ ತಾತ್ಕಾಲಿಕವಾಗಿ ಸ್ಥಳಾಂತರಗೊಂಡಿದ್ದು, ಈ ಸ್ಥಿತಿಯಲ್ಲೂ ಫ್ಲಾಟ್‌ಗೆ ಮಾಸಿಕ 25 ಸಾವಿರ ರೂ. ಬಾಡಿಗೆ ನೀಡುತ್ತಿದ್ದೇವೆ. ತನ್ನ ಸಂಸ್ಥೆಯು ಮನೆಯಿಂದಲ ಕೆಲಸ ಮಾಡಲು ಅವಕಾಶ ನೀಡದಿರುವುದು ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳಲು ಕಾರಣವಾಯಿತು ಎನ್ನುತ್ತಾರೆ.

ಮತ್ತೊಬ್ಬ ಐಟಿ ಉದ್ಯೋಗಿ ಅನಿತಾ ಶ್ರೀನಿವಾಸ್ ಅವರು ಮುಂಬೈಗೆ ತೆರಳುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಅಲ್ಲಿ ಅವರು ತಮ್ಮ ಎರಡನೇ ಸ್ವಂತ ಮನೆ ಹೊಂದಿದ್ದಾರೆ.

ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ನೀರಿನ ಕೊರತೆಯ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ನಗರದಲ್ಲಿ ನೀರಿನ ಕೊರತೆಯಿಲ್ಲ. ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿ ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಳಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅಂತಹ ನೀರಿನ ಕೊರತೆ ಇಲ್ಲ, ಬಿಜೆಪಿಯವರು ಕೊರತೆಯನ್ನು ಸೃಷ್ಟಿಸಿದ್ದಾರೆ. ನಾವು ತಮಿಳುನಾಡಿಗೆ ಕಾನೂನಾತ್ಮಕವಾಗಿ ಕೇಳಿದ್ದಷ್ಟು ನೀರನ್ನು ಮಾತ್ರ ನೀಡುತ್ತಿದ್ದೇವೆ. ಬೆಂಗಳೂರಿಗೆ ನೀರು ಕೊಡುವುದು ನಮ್ಮ ಆದ್ಯತೆ. ನಗರದಲ್ಲಿ ಸುಮಾರು 7 ಸಾವಿರ ಬೋರ್‌ವೆಲ್‌ಗಳು ಸ್ಥಗಿತಗೊಂಡಿದ್ದು, ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT