ಪ್ರಾತಿನಿಧಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಪ್ರೇಯಸಿ ಭೇಟಿಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ತಂದೆಯನ್ನು ಕೊಂದ ಯುವಕ

ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ಬಾಗಲಕೋಟೆ: ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ದಲಿತ ಯುವಕ ಪ್ರವೀಣ ಕಾಂಬಳೆ ಎಂಬಾತ ಮೇಲ್ಜಾತಿಗೆ ಸೇರಿದ 52 ವರ್ಷದ ಸಂಗನಗೌಡ ಪಾಟೀಲರ ಪುತ್ರಿಯೊಂದಿಗೆ ಸಂಬಂಧ ಹೊಂದಿದ್ದರು.

ಆದರೆ, ಸಂಗನಗೌಡ ಪಾಟೀಲ ಅವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗಳಿಂದ ದೂರ ಉಳಿಯುವಂತೆ ಪ್ರವೀಣ ಕಾಂಬಳೆಗೆ ತಾಕೀತು ಮಾಡಿದ್ದರು.

ಆ ಘಟನೆ ನಂತರ ತನ್ನ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಯುವತಿ ಯುವಕನನ್ನು ಭೇಟಿಯಾಗಲು ನಿರಾಕರಿಸಿದ್ದಳು. ನಂತರ ಕುಪಿತಗೊಂಡ ಆರೋಪಿ ಸಂಗನಗೌಡ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮಗಳನ್ನು ಭೇಟಿಯಾಗಲು ಯತ್ನಿಸಿದ್ದಕ್ಕೆ ಕುಪಿತಗೊಂಡ ಸಂಗನಗೌಡ ಪಾಟೀಲ, ಪ್ರವೀಣ ಕಾಂಬಳೆಗೆ ಥಳಿಸಿದ್ದರು.

ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT