ಪ್ರಾತಿನಿಧಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಪ್ರೇಯಸಿ ಭೇಟಿಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ತಂದೆಯನ್ನು ಕೊಂದ ಯುವಕ

ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ಬಾಗಲಕೋಟೆ: ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ದಲಿತ ಯುವಕ ಪ್ರವೀಣ ಕಾಂಬಳೆ ಎಂಬಾತ ಮೇಲ್ಜಾತಿಗೆ ಸೇರಿದ 52 ವರ್ಷದ ಸಂಗನಗೌಡ ಪಾಟೀಲರ ಪುತ್ರಿಯೊಂದಿಗೆ ಸಂಬಂಧ ಹೊಂದಿದ್ದರು.

ಆದರೆ, ಸಂಗನಗೌಡ ಪಾಟೀಲ ಅವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗಳಿಂದ ದೂರ ಉಳಿಯುವಂತೆ ಪ್ರವೀಣ ಕಾಂಬಳೆಗೆ ತಾಕೀತು ಮಾಡಿದ್ದರು.

ಆ ಘಟನೆ ನಂತರ ತನ್ನ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಯುವತಿ ಯುವಕನನ್ನು ಭೇಟಿಯಾಗಲು ನಿರಾಕರಿಸಿದ್ದಳು. ನಂತರ ಕುಪಿತಗೊಂಡ ಆರೋಪಿ ಸಂಗನಗೌಡ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮಗಳನ್ನು ಭೇಟಿಯಾಗಲು ಯತ್ನಿಸಿದ್ದಕ್ಕೆ ಕುಪಿತಗೊಂಡ ಸಂಗನಗೌಡ ಪಾಟೀಲ, ಪ್ರವೀಣ ಕಾಂಬಳೆಗೆ ಥಳಿಸಿದ್ದರು.

ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT