ವಿಸಿ ನಾಲೆಗೆ ಬಿದ್ದ ಕಾರು 
ರಾಜ್ಯ

ಮಂಡ್ಯ: ವಿಸಿ ನಾಲೆಯಲ್ಲಿ ಮತ್ತೊಂದು ದುರಂತ; 25 ಅಡಿ ಆಳಕ್ಕೆ ಬಿದ್ದ ಕಾರು, ಓರ್ವ ಸಾವು

ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ತಡೆಗೋಡೆ ಇಲ್ಲದ ಕಾರಣ ಕಾರು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ತಡೆಗೋಡೆ ಇಲ್ಲದ ಕಾರಣ ಕಾರು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಇದರಿಂದ ಕಾರು ಸಂಪೂರ್ಣ ಜಖಂ ಆಗಿದೆ. ಈ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಮೃತ ಹಾಗೂ ಗಾಯಗೊಂಡ ವ್ಯಕ್ತಿಯ ವಿಳಾಸ ಇನ್ನೂ ತಿಳಿದು ಬಂದಿಲ್ಲ.

ಗಾಯಗೊಂಡ ವ್ಯಕ್ತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ವಿಸಿ ನಾಲೆಯ‌ ಹಲವು ಕಡೆ ತಡೆಗೋಡೆ ಇಲ್ಲದ ಕಾರಣ ಇಂತಹ ಘಟನೆಗಳು ಪದೇ ಪದೇ ಜರುಗುತ್ತಿದ್ದು, ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಿದ್ದರೂ ಸಹ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚು ಗಮನವರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಾವೇರಿ ನೀರಾವರಿ ನಿಗಮ ಹಲವು ದಿನಗಳಿಂದ ನಾಲೆಗೆ ನೀರು ನಿಲ್ಲಿಸಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!