ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಗರದಲ್ಲಿ ಎರಡು ತಿಂಗಳಲ್ಲಿ 174 ಅಪಘಾತ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2024ರ ಮೊದಲ ಎರಡು ತಿಂಗಳಲ್ಲಿ 174 ಅಪಘಾತಗಳು ಸಂಭವಿಸಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2024ರ ಮೊದಲ ಎರಡು ತಿಂಗಳಲ್ಲಿ 174 ಅಪಘಾತಗಳು ಸಂಭವಿಸಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಮತ್ತು ಕಾಮರ್ಸ್ (ಬಿಸಿಐಸಿ) ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 1.4 ಕೋಟಿ ಜನಸಂಖ್ಯೆ ಇದ್ದು, 1,000ಕ್ಕೆ 827 ಜನರ ಬಳಿ ವಾಹನಗಳಿವೆ. ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ವಾಹನಗಳು ಬೆಂಗಳೂರಿನಲ್ಲಿವೆ.

ಅತಿ ವೇಗ ವಾಹನ ಚಾಲನೆಯಿಂದ ಶೇ10 ಸಾವುಗಳು ದೇವನಹಳ್ಳಿಯ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸಂಭವಿಸಿವೆ. ಇದರ ನಂತರ ಕೆಂಗೇರಿ ನೈಸ್ ರಸ್ತೆಯಲ್ಲಿ ಹೆಚ್ಚು ಜನ ಮೃತಪಟ್ಟಿದ್ದಾರೆ.

2023ರಲ್ಲಿ ಮೃತಪಟ್ಟ 914 ಜನರಲ್ಲಿ ದ್ವಿಚಕ್ರ ವಾಹನ ಸವಾರರು ಶೇ74 ರಷ್ಟಿದ್ದರೇ, ಶೇ21 ಪಾದಾಚಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಶೇ.60 ರಷ್ಟು ಜನ 60 ವಯಸ್ಸಿಗಿಂತ ಮೇಲ್ಪಟ್ಟವರಿದ್ದಾರೆಂದು ಹೇಳಿದರು.

ಇದೇ ವೇಳೆ ಸಂಚಾರ ನಿರ್ವಹಣೆಯನ್ನು ಹೆಚ್ಚಿಸಲು, ಅಪಘಾತಗಳನ್ನು ತಡೆಯಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಬೆಂಗಳೂರು ಪೊಲೀಸರು ಕೈಗೊಂಡ ವಿವಿಧ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಸುಧಾರಿತ ತಂತ್ರಜ್ಞಾನಗಳಾದ AI, ಬಿಗ್ ಡೇಟಾ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (IOT), ಜಂಕ್ಷನ್‌ಗಳಲ್ಲಿ AI ಆಧಾರಿತ ಸಿಗ್ನಲ್‌ಗಳು, AI ಕ್ಯಾಮೆರಾ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಪ್ರಮುಖ ಪಾತ್ರವಹಿಸಿವೆ.

ಸಂಚಾರ ದಟ್ಟಣೆ ಅರ್ಥ ಮಾಡಿಕೊಳ್ಳುವುದು ನಮ್ಮ ಪ್ರಮುಖ ಗುರಿಯಾಗಿದ್ದು, ಸಂಚಾರ ದಟ್ಟಣೆಗೆ ಕಾರಣ, ಸ್ಥಳ ಗುರಿಸುವುದು ತಂತ್ರ ರೂಪಿಸಲು ASTraM (ಸುಸ್ಥಿರ ಸಂಚಾರ ನಿರ್ವಹಣೆಗಾಗಿ ಕ್ರಿಯಾಶೀಲ ಬುದ್ಧಿಮತ್ತೆ) ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಸಂಚಾರ ದಟ್ಟಣೆಯ ಮಾದರಿಗಳನ್ನು ಮೇಲ್ವಿಚಾರಣೆ ಮಾಡಲು ವಿವಿಧ ಮೂಲಗಳಿಂದ ಮಾಹಿತಿಗಳನ್ನು ಬಳಸಿಕೊಳ್ಳುವ ವ್ಯವಸ್ಥೆಯಾಗಿದೆ. ಟ್ರಾಫಿಕ್ ನ್ನು ಮಧ್ಯಮ, ಹೆಚ್ಚು ಮತ್ತು ತೀವ್ರ ಎಂದು ವರ್ಗೀಕರಿಸುವ ಮೂಲಕ ನಾವು ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಬಹುದಾಗಿದೆ. ಸಂಚಾರ ದಟ್ಟಣೆಯನ್ನು ತಗ್ಗಿಸಲು ನಕ್ಷೆ ಆಧಾರಿತ ಸೇವೆಗಳು, ಎಫ್​ಎಮ್​ ರೇಡಿಯೋ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಜನರಲ್ಲಿ ತಿಳಿಸುತ್ತಿದ್ದೇವೆ ಎಂದು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT