ಚೂರಿ ಇರಿತ 
ರಾಜ್ಯ

ಮೈಸೂರಿನಲ್ಲಿ ಮರ್ಯಾದಾ ಹತ್ಯೆ: ಯುವಕನಿಗೆ ಚೂರಿ ಇರಿತ, ಸ್ಥಿತಿ ಗಂಭೀರ

ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೈಸೂರು: ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೈಸೂರು ತಾಲ್ಲೂಕು ಕುರುಬಾರಹಳ್ಳಿಯ ಮಂಜುನಾಥ್‌ ಅವರ ಮಗ ಶಶಾಂಕ್‌ ಮೇಲೆ ಮೈಸೂರಿನ ಜೆ.ಪಿ. ನಗರದ ಆನಂದ್‌ ಮತ್ತು ಇತರರ ತಂಡ ಚೂರಿಯಿಂದ ಇರಿದಿದೆ.

ಘಟನೆಯಲ್ಲಿ ಶಶಾಂಕ್‌ನ ಕರುಳು ಹೊರ ಬಂದಿದ್ದು ಆತನ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಡಿವಾಳ ಜಾತಿಯ ಶಶಾಂಕ್‌ ಮತ್ತು ಕುರುಬ ಜಾತಿಯ 19 ವರ್ಷದ ಯುವತಿ ಪರಸ್ಪರ ಪ್ರೀತಿಸಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದರು. ಯುವತಿಗೆ ಬೇರೊಬ್ಬ ಯುವಕನ ಜತೆ ಮದುವೆ ನಿಶ್ಚಯವಾಗಿತ್ತು. ವಿಚಾರ ತಿಳಿದ ಶಶಾಂಕ್ ಯುವತಿ ತನ್ನೊಂದಿಗೆ ಕರೆದುಕೊಂಡು ಹೋಗಿ ದೇವಸ್ಥಾನದಲ್ಲಿ ವಿವಾಹ ಮಾಡಿಕೊಂಡಿದ್ದ.

ದಂಪತಿ ಮೇಳಾಪುರ ಗ್ರಾಮದಲ್ಲಿ ವಾಸವಾಗಿರುವ ವಿಚಾರ ತಿಳಿದ ಅನುಷ್ಕಾ ಪೋಷಕರು ಹಾಗೂ ಸಂಬಂಧಿಕರು ಮನೆಗೆ ನುಗ್ಗಿ ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಆತನ ಹೊಟ್ಟೆ ಹಾಗೂ ಇತರೆ ಭಾಗಗಳಿಗೆ ಚೂರಿಯಿಂದ ಇರಿದ್ದಾರೆ. ಘಟನೆ ಸಂಬಂಧ ಯುವತಿ ಅನುಷ್ಕಾ ತಂದೆ ಆನಂದ್ ಸೇರಿ 13 ಮಂದಿ ವಿರುದ್ಧ ದೂರು ದಾಖಲಿಸಿದ್ದು, ದೂರು ಆಧರಿಸಿ 8 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT