ಕನ್ನಡಪ್ರಭ.ಕಾಮ್ ಅಂಕಣ 
ರಾಜ್ಯ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಜನವರಿಯಲ್ಲೇ ಸುಳಿವು ನೀಡಿದ್ದ kannadaprabha.com ಅಂಕಣ!

ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಬೆಂಗಳೂರು: ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಳೆದ 2-3 ದಿನಗಳಿಂದಲೂ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪುವ ಸಾಧ್ಯವಿದೆ ಎಂದು ಕಳೆದ 2 ತಿಂಗಳ ಹಿಂದೆಯೇ ಅಂದರೆ ಜನವರಿ 05 ರಂದೇ ಕನ್ನಡಪ್ರಭ.ಕಾಮ್ ನ ಸುದ್ದಿ ವಿಶ್ಲೇಷಣೆ ಅಂಕಣದಲ್ಲಿ ಬರೆಯಲಾಗಿತ್ತು.

ಲೋಕಸಭೆ: ಬಿಜೆಪಿಗೆ ಆ ನಾಲ್ಕು ಕ್ಷೇತ್ರಗಳದ್ದೇ ತಲೆನೋವು ಎಂಬ ಶಿರ್ಷಿಕೆಯಡಿಯಲ್ಲಿ ಜ.05 ರಂದು ಪ್ರಕಟವಾಗಿದ್ದ ಅಂಕಣದಲ್ಲಿ ಮೈಸೂರು-ಕೊಡಗು, ಬೆಂಗಳೂರು ಉತ್ತರ, ಉಡುಪಿ ಚಿಕ್ಕಮಗಳೂರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬದಲಾವಣೆಯಾಗುವ ಸಾಧ್ಯತೆ ಇದ್ದು ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿದೆ ಎಂದು ವಿಶ್ಲೇಷಿಸಲಾಗಿತ್ತು. ಅದರಂತೆಯೇ ಈಗ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ, ಉಡುಪಿ ಚಿಕ್ಕಮಗಳೂರು, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಬಿಜೆಪಿ ಪಟ್ಟಿ ಪ್ರಕಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!