ದೇವೇಂದ್ರ ಫಡ್ನವಿಸ್ 
ರಾಜ್ಯ

ಮೋದಿ 10 ವರ್ಷಗಳ ಆಡಳಿತ ಟ್ರೇಲರ್ ಅಷ್ಟೇ, 'ಪಿಕ್ಚರ್ ಅಭಿ ಬಾಕಿ ಹೈ': ಫಡ್ನವಿಸ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದ ಆಡಳಿತ ಟ್ರೈಲರ್‌ಅಷ್ಟೇ, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ಮಂಗಳವಾರ ವ್ಯಕ್ತಪಡಿಸಿದರು.

ಮಂಗಳೂರು: ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದ ಆಡಳಿತ ಟ್ರೈಲರ್‌ಅಷ್ಟೇ, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು ಮಂಗಳವಾರ ವ್ಯಕ್ತಪಡಿಸಿದರು.

ಮಂಗಳೂರಿನ ಸಂಘನಿಕೇತನದಲ್ಲಿ ದ.ಕ.ಜಿಲ್ಲಾ ಮಟ್ಟದ ಬಿಜೆಪಿ ಬೂತ್‌ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 2024ರಿಂದ 2029ರ ವರೆಗೂ ಮೋದಿಯೇ ರಾಷ್ಟ್ರದ ನಾಯಕ. ಕಳೆದ 10 ವರ್ಷದ ಅವಧಿಯಲ್ಲಿ ನೂರು ವರ್ಷದ ಸಾಧನೆ ಮಾಡಿದ್ದಾರೆಂದು ಹೇಳಿದರು.

2024ರ ಲೋಕಸಭೆ ಚುನಾವಣೆ ದೇಶದ ಭದ್ರತೆ ಮತ್ತು ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಬಿಜೆಪಿಯ ಬದಲು ಭಾರತಕ್ಕೆ ಮತ ನೀಡಿ ಎಂದು ಕೇಳಬೇಕೆಂದು ಕರೆ ನೀಡಿದರು.

ಈ ಚುನಾವಣೆಯಲ್ಲಿ ನಾವು ಬಿಜೆಪಿಗೆ ಮತ ಹಾಕುತ್ತಿಲ್ಲ, ಭಾರತಕ್ಕೆ ಮತ ಹಾಕುತ್ತಿದ್ದೇವೆ. ನಾವು ಭಾರತದ ಸುರಕ್ಷತೆ ಮತ್ತು ಭವಿಷ್ಯಕ್ಕಾಗಿ ಮತ ಹಾಕುತ್ತಿದ್ದೇವೆ, ಮುಂದೆ ವಿಶ್ವದಲ್ಲಿ ಭಾರತ ಮೂರನೇ ಆರ್ಥಿಕತೆ ಹೊಂದಿದ ದೇಶವಾಗಲಿದೆ. 2024ರ ಚುನಾವಣೆ ಹೊಸ ಇತಿಹಾಸ ನಿರ್ಮಿಸುವ ಚುನಾವಣೆ. ನಾವು ಸರ್ಕಾರಗಳನ್ನು ಐದು ವರ್ಷಗಳಿಗೊಮ್ಮೆ ಚುನಾಯಿಸುತ್ತೇವೆ. ಆದರೆ, ಮೋದಿ 10 ವರ್ಷಗಳಲ್ಲಿ ನೂರು ವರ್ಷದ ಕೆಲಸ ಮಾಡಿದ್ದಾರೆ. ಮೋದಿ ಗ್ಯಾರಂಟಿ ಕಾಂಗ್ರೆಸ್‌ನ ಗ್ಯಾರಂಟಿಗಳಂತಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳು ಯಾವುದೂ ಪೂರ್ಣವಾಗಿಲ್ಲ. ಜನರನ್ನು ಮೂರ್ಖರನ್ನಾಗಿ ಮಾಡಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಮೋದಿ ಗ್ಯಾರಂಟಿ ಎನ್ನುವುದೇ ಗ್ಯಾರಂಟಿಗಳ ಮಹಾ ಗ್ಯಾರಂಟಿ. ಕರ್ನಾಟಕದಲ್ಲಿ ದೇಶ ವಿರೋಧಿ ಜನರಿಗೆ ಸಿದ್ದರಾಮಯ್ಯ ಸರ್ಕಾರ ಬೆಂಬಲ ಕೊಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಬೆಂಬಲಿಸುವ ಸರ್ಕಾರ ಎಂಥದ್ದು? ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದೇಶವಿರೋಧಿಗಳಿಗೆ ಬಲ ಬಂದಿದೆ. ವೋಟ್ ಬ್ಯಾಂಕ್‌ಗಾಗಿ ದೇಶದ್ರೋಹಿಗಳನ್ನು ಯಾರೂ ಬೆಂಬಲಿಸಬಾರದು. ಯಾವುದೇ ದೇಶ ವಿರೋಧಿ ಘಟನೆಗಳನ್ನು ಆಯಾ ಸರ್ಕಾರಗಳು ಖಂಡಿಸಬೇಕು ಎಂದು ತಿಳಿಸಿದು..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT