ಮಾಜಿ ಸಚಿವ ಪ್ರಭು ಚೌಹಾಣ್ 
ರಾಜ್ಯ

ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೀದರ್: ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಭು ಚೌಹಾಣ್ ಅವರು 3 ದಿನಗಳ‌ ಹಿಂದೆ ಮುಂಬೈ ನಗರಕ್ಕೆ ತೆರಳಿದ್ದರು. ಗುರುವಾರ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮುಂಬೈ ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸದ್ಯ ಅವರಿಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಪ್ರಸ್ತುತ ಚೌಹಾಣ್ ಆರೋಗ್ಯ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗಲಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.‌

ಬೀದರ್‌ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ಖುದ್ದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್​ ಟಿಕೆಟ್​ ಭಗವಂತ್ ಖೂಬಾಗೆ ನೀಡಿದೆ. ಇದರ ಬೆನ್ನಲ್ಲೇ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT