ರಾಜೀವ್ ಕುಮಾರ್  
ರಾಜ್ಯ

ಲೋಕಸಭೆ ಚುನಾವಣೆ ಜತೆಗೆ ಸುರಪುರ ಉಪ ಚುನಾವಣೆ ಘೋಷಣೆ; ಮೇ 7 ರಂದು ಮತದಾನ

ಲೋಕಸಭೆ ಚುನಾವಣೆಯ ಜೊತೆಗೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗ ಶನಿವಾರ ಉಪ ಚುನಾವಣೆ ಘೋಷಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆಯ ಜೊತೆಗೆ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಕೇಂದ್ರ ಚುನಾವಣಾ ಆಯೋಗ ಶನಿವಾರ ಉಪ ಚುನಾವಣೆ ಘೋಷಿಸಿದ್ದು, ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಇಂದು ದೆಹಲಿಯ ವಿಜ್ಞಾನಭವನದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು,

ಲೋಕಸಭಾ ಚುನಾವಣೆ ಜೊತೆಯಲ್ಲಿ ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಈ 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕರ್ನಾಟಕದ ಸುರಪುರ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ಅಕಾಲಿಕ ನಿಧನದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಮೇ 7 ರಂದು ಉಪ ಚುನಾವಣೆ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ದೇಶದ 26 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ

ರಾಜಾ ವೆಂಕಟಪ್ಪ ನಾಯಕ್ ಪುತ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸೋತಿದ್ದ ರಾಜು ಗೌಡ (ನರಸಿಂಹ ನಾಯಕ್) ಅವರೇ ಮತ್ತೆ ಕಮಲ ಚಿಹ್ನೆ ಅಡಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಾ ವೆಂಕಟಪ್ಪ ನಾಯಕ್ ಅವರು ಕಳೆದ ಫೆಬ್ರವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರನ್ನು ಈ ಬಾರಿ ಉಗ್ರಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ನಡೆಯಲಿದೆ ಮತ್ತು ಉತ್ತರ ಕರ್ನಾಟಕದಲ್ಲಿ ಮೇ 7 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT