ವಿಧಾನಸೌಧ 
ರಾಜ್ಯ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಮುಕುಂದರಾಜ್ ನೇಮಕ

ರಾಜ್ಯ ಸರ್ಕಾರ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯುಎಚ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ ಅವರು ನೇಮಕಗೊಂಡಿದ್ದಾರೆ.

ಅಕಾಡೆಮಿಗಳ ಅಧ್ಯಕ್ಷರು

  • ಕನ್ನಡ ಪುಸ್ತಕ ಪ್ರಾಧಿಕಾರ – ಅಧ್ಯಕ್ಷರು ಮೈಸೂರು ಮಾನಸ

  • ಕರ್ನಾಟಕ ಸಾಹಿತ್ಯ ಅಕಾಡೆಮಿ- ಎಲ್ ಎನ್ ಮುಕುಂದರಾಜ್

  • ಕರ್ನಾಟಕ ನಾಟಕ ಅಕಾಡೆಮಿ- ಕೆವಿ ನಾಗರಾಜಮೂರ್ತಿ

  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ- ಕೃಪಾ ಫಡಕಿ

  • ಕರ್ನಾಟಕ ಶಿಲ್ಪ ಕಲಾ ಅಕಾಡಮಿ- ಎಂಸಿ ರಮೇಶ್

  • ಲಲಿತ ಕಲಾ ಅಕಾಡಮಿ- ಡಾ.ಪಸ ಕುಮಾರ್

  • ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಂ ಶೆಟ್ಟಿ

  • ಜಾನಪದ ಅಕಾಡೆಮಿ- ಶಿವ ಪ್ರಸಾದ್ ಗೊಲ್ಲಹಳ್ಳಿ

  • ತುಳು ಸಾಹಿತ್ಯ ಅಕಾಡೆಮಿ- ತಾರಾನಾಥ ಗಟ್ಟಿ ಕಾಪಿಕಾಡ್

  • ಕೊಂಕಣಿ ಸಾಹಿತ್ಯ ಅಕಾಡೆಮಿ- ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್

  • ಬ್ಯಾರಿ ಸಾಹಿತ್ಯ ಅಕಾಡೆಮಿ- ಉಮರ್ ಯು ಎಚ್

  • ಅರೆ ಭಾಷಾ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ- ಸದಾನಂದ ಮಾವಜಿ

  • ಬಯಲಾಟ ಅಕಾಡೆಮಿ - ದುರ್ಗದಾಸ್

  • ಬಂಜಾರ ಅಕಾಡೆಮಿ - ಡಾಕ್ಟರ್‌ ಎಂ ಆರ್ ಗೋವಿಂದಸ್ವಾಮಿ

  • ರಂಗ ಸಮಾಜ- ಡಾ.ರಾಮಕೃಷ್ಣಯ್ಯ

  • ಕೊಡವ ಸಾಹಿತ್ಯ ಅಕಾಡೆಮಿ- ಅಜ್ಜಿನಕೊಂಡ ಮಹೇಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT