Bitcoin 
ರಾಜ್ಯ

ಬಿಟ್ ಕಾಯಿನ್ ಪ್ರಕರಣ: ಆರೋಪಿ ಶ್ರೀಧರ್ ಪೂಜಾರ್ ಕುರಿತ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ, ನೋಟಿಸ್ ಜಾರಿ

ಬಿಟ್ ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದೆ.

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದೆ.

ಹೌದು.. ಬಿಟ್ ಕಾಯಿನ್ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್​ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ. ಈ ಕುರಿತಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್​ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಸಿಐಡಿ ಫೈನಾನ್ಶಿಯಲ್ ಇಂಟೆಲಿಜೆನ್ಸ್ ಡಿವೈಎಸ್​ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಟ್ ಕಾಯಿನ್ ಕೇಸ್​ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದು, ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದುಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. DySP ಶ್ರೀಧರ್ ಪೂಜಾರ್​​ ಬಗ್ಗೆ ಮಾಹಿತಿಯಿದ್ದರೆ ಸಿಐಡಿ ಫೈನಾನ್ಶಿಯಲ್ ಇಂಟೆಲಿಜೆನ್ಸ್ ಡಿವೈಎಸ್​ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಹುಮಾನ ಘೋಷಣೆ

ಸಿಐಡಿ SIT ಬಂಧಿಸಲು ತೆರಳಿದ್ದ ವೇಳೆ ಎಸ್ಐಟಿ ಟೀಂ ಕಾರಿಗೆ ಮತ್ತೊಂದು ವಾಹನ ಡಿಕ್ಕಿಹೊಡೆಸಿ ಶ್ರೀಧರ್ ಪರಾರಿಯಾಗಿದ್ದ. ಫೆಬ್ರವರಿ 27 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಂಬೇಡ್ಕರ್ ವೀಧಿಯ ಕಾಫಿ ಬೋರ್ಡ್ ಜಂಕ್ಷನ್ ಬಳಿ ಈ ಘಟನೆ ನಡೆದಿತ್ತು. ಕಾರಿಗೆ ಡಿಕ್ಕಿ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಎಸ್​ಐಟಿ ಕೇಸ್ ದಾಖಲಿಸಿದೆ. ಇತ್ತೀಚೆಗಷ್ಟೇ ವಿಧಾನಸೌಧ ಪೊಲೀಸರು ಹಿರಿಯ ಅಧಿಕಾರಿಯ ವಿರುದ್ಧ ಐಪಿಸಿ 307 (ಕೊಲೆ ಯತ್ನ), 332ರ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಶ್ರೀಧರ್ ಪೂಜಾರ್ ಪತ್ತೆಗಾಗಿ ಬಹುಮಾನ ಘೋಷಿಸಿದೆ.

ಜಾಮೀನಿಗೆ ಅರ್ಜಿ ಹಾಕಿದ್ದ ಶ್ರೀಧರ್ ಪೂಜಾರ್

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಧರ್ ಪೂಜಾರ್ ಇತ್ತೀಚೆಗೆ ಜಾಮೀನು ಅರ್ಜಿ ಹಾಕಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ವಜಾ ಮಾಡಿದ ಹಿನ್ನಲೆ ಪ್ರಮುಖ ಆರೋಪಿಯ ಬಂಧನಕ್ಕೆ ಎಸ್.ಐ.ಟಿ ತಂಡ ಹೋಗಿದ್ದರು. ಈ ಸಂದರ್ಭದಲ್ಲಿ ಪೊಲೀಸರ ವಾಹನಕ್ಕೆ ಗುದ್ದಿ ಎಸ್ಕೇಪ್ ಆಗಿದ್ದಾರೆ. ಈಗಾಗಲೇ ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT