ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ 
ರಾಜ್ಯ

ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲ್ವಿಚಾರಣೆ ಮಾಡಲಿದ್ದಾರೆ ಚುನಾವಣಾಧಿಕಾರಿಗಳು: ಮನೋಜ್‌ ಕುಮಾರ್ ಮೀನಾ

ನಗರದಲ್ಲಿ ವಸೂಲಿ ದಂಧೆಗೆ ಇಳಿದಿದ್ದ ಖಾಸಗಿ ನೀರಿನ ಟ್ಯಾಂಕರ್‌ಗಳ ಪೂರೈಕೆ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿರುವುದಲ್ಲದೆ, ಮಾದರಿ ನೀತಿ ಸಂಹಿತೆ (ಎಂಸಿಸಿ) ಘೋಷಣೆಯಾದ ನಂತರ ಖಾಸಗಿ ನೀರಿನ ಟ್ಯಾಂಕರ್‌ಗಳ ಚಲನವಲನವನ್ನು ಚುನಾವಣಾಧಿಕಾರಿಗಳು ಸಹ ಮೇಲ್ವಿಚಾರಣೆ ಮಾಡಲಿದ್ದಾರೆ.

ಬೆಂಗಳೂರು: ನಗರದಲ್ಲಿ ವಸೂಲಿ ದಂಧೆಗೆ ಇಳಿದಿದ್ದ ಖಾಸಗಿ ನೀರಿನ ಟ್ಯಾಂಕರ್‌ಗಳ ಪೂರೈಕೆ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿರುವುದಲ್ಲದೆ, ಮಾದರಿ ನೀತಿ ಸಂಹಿತೆ (ಎಂಸಿಸಿ) ಘೋಷಣೆಯಾದ ನಂತರ ಖಾಸಗಿ ನೀರಿನ ಟ್ಯಾಂಕರ್‌ಗಳ ಚಲನವಲನವನ್ನು ಚುನಾವಣಾಧಿಕಾರಿಗಳು ಸಹ ಮೇಲ್ವಿಚಾರಣೆ ಮಾಡಲಿದ್ದಾರೆ.

ಖಾಸಗಿ ನೀರಿನ ಟ್ಯಾಂಕರ್‌ಗಳಲ್ಲಿ ಯಾವುದೇ ಅವ್ಯವಹಾರ ಕಂಡುಬಂದಲ್ಲಿ ತಕ್ಷಣವೇ ಚುನಾವಣಾ ಸಿಬ್ಬಂದಿಗೆ 1950 ಡಯಲ್ ಮಾಡುವ ಅಥವಾ ವಿಜಿಲ್ ಆ್ಯಪ್‌ ಮೂಲಕ ತಿಳಿಸಬಹುದು. ಜಿಲ್ಲಾಧಿಕಾರಿ, ಐಟಿ, ಅಬಕಾರಿ ಅಥವಾ ಇತರ ಯಾವುದೇ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಮಸ್ಯೆಯನ್ನು ತಿಳಿಸಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ನೀರಿನ ಟ್ಯಾಂಕರ್ ಸರಬರಾಜಿಗೆ ಯಾವುದೇ ನಿಯಂತ್ರಣ ಇಲ್ಲದಿದ್ದರೂ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳಿಗೆ ಸೇರಿದ ಖಾಸಗಿ ಟ್ಯಾಂಕರ್‌ಗಳು ಚುನಾವಣೆಯನ್ನು ನೆಪ ಮಾಡಿಕೊಂಡು ನೀರು ಪೂರೈಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಂಸಿಸಿ ಅಡಿಯಲ್ಲಿ ಬರ ಪರಿಹಾರವನ್ನು ಸೇರಿಸದಿದ್ದರೂ, ರಾಜಕೀಯ ಪಕ್ಷವು ನೀಡುವ ಸೌಲಭ್ಯಗಳನ್ನು ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT