ಸಿಎಂ ಸಿದ್ದರಾಮಯ್ಯ. 
ರಾಜ್ಯ

ಬೆಂಗಳೂರಿಗೆ 500 ಎಂಎಲ್ ಡಿ ನೀರಿನ ಕೊರತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗೆ 500 ಎಂಎಲ್ ಡಿ ನೀರಿನ ಕೊರತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿಗೆ 500 ಎಂಎಲ್ ಡಿ ನೀರಿನ ಕೊರತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 2,600 ಎಂಎಲ್ ಡಿಯಷ್ಟು ನೀರಿನ ಅಗತ್ಯತೆ ಇದೆ, ಈ ಪೈಕಿ 500 ಎಂಎಲ್ ಡಿ ನೀರಿನ ಕೊರತೆ ಇದೆ ಎಂದು ಸಿಎಂ ಹೇಳಿದ್ದು, ನೀರಿನ ಕೊರತೆಯನ್ನು ನಿಭಾಯಿಸುವುದಕ್ಕೆ ಕಾರ್ಯ ಯೋಜನೆಯನ್ನು ಸಿದ್ಧಪಡಿಸುವುದಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಸಿಎಂ ಪ್ರಕಾರ, ಕಾವೇರಿ ನದಿಯಿಂದ 1,470 ಎಂಎಲ್‌ಡಿ ನೀರು ಬರುತ್ತದೆ ಮತ್ತು 650 ಎಂಎಲ್‌ಡಿ ಬೋರ್‌ವೆಲ್‌ನಿಂದ ಪಡೆಯಲಾಗುತ್ತದೆ. ಬೆಂಗಳೂರಿನಲ್ಲಿ 14,000 ಬೋರ್‌ವೆಲ್‌ಗಳಿದ್ದು, 6,900 ಬತ್ತಿ ಹೋಗಿವೆ. ಜಲಮೂಲಗಳು ಅತಿಕ್ರಮಿಸಲ್ಪಟ್ಟಿವೆ ಅಥವಾ ನಾಶವಾಗಿದೆ.

ನಗರದ ಬಹುತೇಕ ನೀರಿನ ಬವಣೆ ನೀಗಿಸಲು ಜೂನ್‌ನಲ್ಲಿ ಆರಂಭವಾಗಲಿರುವ ಕಾವೇರಿ ಐದು ಯೋಜನೆ ಬಗ್ಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 2006-07ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕಾವೇರಿ ಐದು ಯೋಜನೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಸಿಎಂ ಹೇಳಿದರು.

ನೀರಿನ ಬಿಕ್ಕಟ್ಟಿನ ಆತಂಕವನ್ನು ಹೋಗಲಾಡಿಸುವ ಪ್ರಯತ್ನವಾಗಿ, ಕಾವೇರಿ ಮತ್ತು ಕಬಿನಿಯಲ್ಲಿ ಸಾಕಷ್ಟು ಕುಡಿಯುವ ನೀರಿನ ಸಂಗ್ರಹ ಇದೆ, ಅದು ಜೂನ್ ವರೆಗೆ ಸಾಕಾಗುತ್ತದೆ. ಕೆಆರ್ ಎಸ್ ನಲ್ಲಿ 11.04 ಟಿಎಂಸಿ, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ. ಸರ್ಕಾರವು 313 ಸ್ಥಳಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯಲಿದೆ ಮತ್ತು 1,200 ನಿಷ್ಕ್ರಿಯ ಕೊಳವೆ ಬಾವಿಗಳನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್