ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಅನೈತಿಕ ಸಂಬಂಧ ಶಂಕೆ: ವಿಜಯಪುರದ ನಿಡಗುಂದಿ ಗ್ರಾಮದಲ್ಲಿ ಜೋಡಿ ಕೊಲೆ

Shilpa D

ವಿಜಯಪುರ: ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಅವರಿಬ್ಬರೂ ಬೇರೆ ಬೇರೆಯವರಾಗಿದ್ದು, ಜತೆಯಾಗಿದ್ದಾಗ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಹಾಗಾಗಿ ಇದು ಅಕ್ರಮ‌ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ನಡೆದಿರುವ ಜೋಡಿ ಕೊಲೆ ಆಗಿರಬಹುದು ಎಂದು ಸಂಶಯಿಸಲಾಗಿದೆ. ಸೋಮವಾರ ರಾತ್ರಿ ನಿಡಗುಂದಿ ತಾಲ್ಲೂಕಿನ ಮಾರಡಗಿ ತಾಂಡಾದ ಸಮೀಪ ನಡೆದಿದೆ.

ಮೃತರು ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35) ಹಾಗೂ ಪಾರ್ವತಿ ತಳವಾರ (38) ಎಂದು ಗುರುತಿಸಲಾಗಿದೆ. ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಯಾರೂ ಮಾಡಿದರು? ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿದ್ದಾರೆ.

SCROLL FOR NEXT