ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಕಳ್ಳತನದ ಆರೋಪದ ಮೇಲೆ ಬಾಲಕಿಗೆ ವಿವಸ್ತ್ರಗೊಳಿಸಿ ಅವಮಾನ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Shilpa D

ಬಾಗಲಕೋಟೆ: ಪರ್ಸಿನಲ್ಲಿರುವ ಹಣ ಕದ್ದಿರುವ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ತಾಲ್ಲೂಕಿನ ಹಳೆ ಕದಾಂಪುರ ಗ್ರಾಮದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಕಿ ಮತ್ತು ಮುಖ್ಯೋಪಾಧ್ಯಾಯರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಶನಿವಾರ ಕದಾಂಪುರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ದಿವ್ಯಾ ಬಾರಕೇರ (13) ಮೃತ ಬಾಲಕಿ. ಶಾಲೆಯ ಶಿಕ್ಷಕಿಯೊಬ್ಬರು 2,000 ರು ಹಣ ಕದ್ದ ಆರೋಪ ಮಾಡಿ ಬಾಲಕಿಯನ್ನು ವಿವಸ್ತ್ರಗೊಳಿಸಿದ್ದರು ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರು ತಮ್ಮ ಪರ್ಸ್‌ನಿಂದ ಹಣವನ್ನು ಕಳೆದುಕೊಂಡ ನಂತರ, 14 ವರ್ಷದ ಮೃತ ಬಾಲಕಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅವರು ಎಲ್ಲಾ ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ಪರಿಶೀಲಿಸಿದರು ಮತ್ತು ಅವರ ನಿರಪರಾಧಿ ಎಂದು ಸಾಬೀತುಪಡಿಸಲು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಹಣ ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದು ದೃಢಪಟ್ಟಿಲ್ಲವಾದರೂ, ನಾಲ್ವರು ವಿದ್ಯಾರ್ಥಿಗಳಲ್ಲಿ, 14 ವರ್ಷದ ಬಾಲಕಿ ಘಟನೆಯ ನಂತರ ತೀವ್ರವಾಗಿ ಅಸಮಾಧಾನಗೊಂಡಿದ್ದಾಳೆ. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಪೋಷಕರು ಪೊಲೀಸರಿಗೆ ವಿಷಯ ತಿಳಿಸಲು ತಲೆಕೆಡಿಸಿಕೊಳ್ಳದೆ ಆಕೆಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಮೃತ ಬಾಲಕಿಯ ಪೋಷಕರು ಮರುದಿನ ಪೊಲೀಸ್ ಠಾಣೆಗೆ ಭೇಟಿ ನೀಡಿ ಶಿಕ್ಷಕಿ ಜಯಶ್ರೀ ಮಿಶಿಕೋಟಿ ಮತ್ತು ಮುಖ್ಯಶಿಕ್ಷಕ ಹೆಚ್ ಎಂ ಮುಜಾವರ್ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಮೃತ ಬಾಲಕಿಯ ತಂದೆ, ಅಪರಾಧವನ್ನು ಒಪ್ಪಿಕೊಂಡು ಹಣವನ್ನು ಹಿಂದಿರುಗಿಸುವಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಒತ್ತಾಯಿಸಿದ್ದಾರೆ, ಇಲ್ಲದಿದ್ದರೆ ವಿದ್ಯಾರ್ಥಿಗಳ ಪ್ರವೇಶವನ್ನು ರದ್ದುಗೊಳಿಸಲಾಗುವುದು ಎಂದು ಆರೋಪಿಸಿದರು. ಭಯ ಮತ್ತು ಹತಾಶೆಯಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅವರು ಹೇಳಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT