ಮಹಿಳೆ ಎದುರೇ ಸಿಬ್ಬಂದಿ ಅಶ್ಲೀಲ ವರ್ತನೆ 
ರಾಜ್ಯ

Bengaluru Metro ದಲ್ಲಿ ಮತ್ತೊಂದು Sexual harassment ಪ್ರಕರಣ: ಮಹಿಳೆ ಎದುರು ಅಶ್ಲೀಲ ವರ್ತನೆ, ದೂರು ದಾಖಲು, ಸಿಬ್ಬಂದಿ ಅಮಾನತು

ನಮ್ಮ ಮೆಟ್ರೋ (Namma Metro)ದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಕೇಳಿಬಂದಿದ್ದು, ಈ ಬಾರಿ ಸ್ವತಃ ಸಿಬ್ಬಂದಿಯೊಬ್ಬ ಮಹಿಳೆಯ ಮುಂದೆ ಅಸಭ್ಯವಾದ ವರ್ತನೆ (Indecent behavior) ತೋರಿದ್ದಾನೆ ಎಂದು ಹೇಳಲಾಗಿದೆ.

ಬೆಂಗಳೂರು: ನಮ್ಮ ಮೆಟ್ರೋ (Namma Metro)ದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಕೇಳಿಬಂದಿದ್ದು, ಈ ಬಾರಿ ಸ್ವತಃ ಸಿಬ್ಬಂದಿಯೊಬ್ಬ ಮಹಿಳೆಯ ಮುಂದೆ ಅಸಭ್ಯವಾದ ವರ್ತನೆ (Indecent behavior) ತೋರಿದ್ದಾನೆ ಎಂದು ಹೇಳಲಾಗಿದೆ.

ಹೌದು.. ಮಹಿಳೆ (Women) ಎದುರು ನಮ್ಮ ಮೆಟ್ರೋ (Namma Metro) ಸಿಬ್ಬಂದಿಯೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಫ್ಲಾಟ್​​ಫಾರ್ಮ್​​ನಲ್ಲಿ (Jalahalli Metro Station) ನಡೆದಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಕುರಿತು ಮಹಿಳೆಯೊಬ್ಬರು ನಮ್ಮ ಮೆಟ್ರೋಗೆ ದೂರು ನೀಡಿದ್ದಾರೆ. ಆದರೆ ನಮ್ಮ ಮೆಟ್ರೋ ಸಿಬ್ಬಂದಿ (Namma Metro Staff) ಯಾವುದೇ ಕ್ರಮಕೈಗೊಳ್ಳದ ಹಿನ್ನೆಲ್ಲೆಯಲ್ಲಿ ಸದ್ಯ ಮಹಿಳೆ ಪೊಲೀಸರಿಗೆ ಟ್ಯಾಗ್​ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮೊಬೈಲ್ ಕೃತ್ಯ ಸೆರೆ

ನಮ್ಮ ಮೆಟ್ರೋ ಸಿಬ್ಬಂದಿ ಮಹಿಳೆ ಎದುರು ಫ್ಲಾಟ್​ ಫಾರ್ಮ್ ನಲ್ಲೇ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ಸಿಬ್ಬಂದಿಯೋರ್ವ ತನ್ನ ಖಾಸಗಿ ಅಂಗವನ್ನು ಮಹಿಳೆ ಎದುರು ಸ್ಪರ್ಶ ಮಾಡುತ್ತಾ ಅಸಭ್ಯವಾಗಿ ವರ್ತನೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೃತ್ಯದ ಕುರಿತು ಮಹಿಳೆ ಆಕ್ಷೇಪಿಸಿದರೂ ಆತ ನಿಲ್ಲಿಸಿಲ್ಲ. ಬಳಿಕ ಆಕೆ ಇದನ್ನು ವಿಡಿಯೋ ಮಾಡಿಕೊಳ್ಳಲು ಆರಂಭಿಸಿದಾಗ ಆತ ಅಲ್ಲಿಂದ ಹೋಗಿದ್ದಾನೆ ಎಂದು ಗೊತ್ತಾಗಿದೆ.

ದೂರು ದಾಖಲು

ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್​ನಲ್ಲಿ ಸಿಬ್ಬಂದಿ ಅಸಭ್ಯ ವರ್ತನೆ ತೋರಿದ್ದಾನೆ. ಈ ಘಟನೆ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿದರೂ ಮೇಲಾಧಿಕಾರಿಗಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯ ಮೆಟ್ರೋ ಫ್ಲಾಟ್​ಫಾರ್ಮ್​ನಲ್ಲಿ ಸಿಬ್ಬಂದಿ ತೋರಿದ ಅಸಭ್ಯ ವರ್ತನೆ ಕುರಿತು ಮಹಿಳೆ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡಿದ್ದಾರೆ.

ಆತಂಕಿತರಾದ ಮಹಿಳೆ, ʼನನಗೆ ಇಲ್ಲಿ ಅಸುರಕ್ಷಿತʼ ಎನಿಸುತ್ತಿದೆ ಎಂದು ಎಕ್ಸ್‌ನಲ್ಲಿ ಸಂದೇಶ ಹಾಕಿದ್ದಾರಲ್ಲದೆ, ಕ್ರಮ ಕೈಗೊಳ್ಳುವಂತೆ ಮೆಟ್ರೋ ಅಧಿಕಾರಿಗಳು ಹಾಗೂ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಸಿಬ್ಬಂದಿ ಅಮಾನತು: BMRCL ಸ್ಪಷ್ಟನೆ

ಜಾಲಹಳ್ಳಿ ಘಟನೆಯ ದೂರಿಗೆ ಪ್ರತಿಕ್ರಿಯಿಸಿರುವ ಬಿಎಂಆರ್ ಸಿಎಲ್, ಘಟನೆ ಕುರಿತು ವಿವರವಾದ ತನಿಖೆಗಾಗಿ ಭದ್ರತಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮಹಿಳಾ ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆಗೆ ಸಂಸ್ಥೆ ಒತ್ತು ನೀಡುತ್ತದೆ. ಮಹಿಳಾ ಭದ್ರತೆ ವಿಚಾರದಲ್ಲಿ ಬಿಎಂಆರ್ ಸಿಎಲ್ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT